ಬ್ರೇಕಿಂಗ್ ನ್ಯೂಸ್
03-03-24 10:49 pm Mangalore Correspondent ಕರಾವಳಿ
ಮಂಗಳೂರು, ಮಾ.3: ಹಾಲಿ ಕೇಂದ್ರ ಸಚಿವೆ, ಎರಡು ಬಾರಿಯ ಸಂಸದೆ ಮೀನಾಕ್ಷಿ ಲೇಖಿ ದೆಹಲಿ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಸೀಟು ಸಿಗದ ಸಿಟ್ಟಿನಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಜಿಲ್ಲಾ ಸಮಾವೇಶದಿಂದ ದೂರವುಳಿದಿದ್ದು, ಕಾರ್ಯಕ್ರಮವನ್ನು ಕೊನೆಕ್ಷಣದಲ್ಲಿ ರದ್ದು ಮಾಡಲಾಗಿದೆ.
ಇತ್ತೀಚೆಗೆ ಮೀನಾಕ್ಷಿ ಲೇಖಿ ಪಾಲ್ಗೊಳ್ಳುವ ಕಾರ್ಯಕ್ರಮವನ್ನು ಸಂಘನಿಕೇತನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ರದ್ದುಗೊಂಡಿದ್ದರಿಂದ ಮತ್ತೆ ಮೀನಾಕ್ಷಿ ಲೇಖಿ ಕಾರ್ಯಕ್ರಮವನ್ನು ಮಾ.4ರಂದು ಸಂಘ ನಿಕೇತನದಲ್ಲಿಯೇ ಆಯೋಜಿಸಲಾಗಿತ್ತು. ತರಾತುರಿಯಲ್ಲಿ ಶನಿವಾರ ಅಂತಿಮಗೊಳಿಸಿ ಅದಕ್ಕಾಗಿ ಸಿದ್ಧತೆಯನ್ನೂ ಮಾಡಲಾಗಿತ್ತು. ಆದರೆ, ಮೀನಾಕ್ಷಿ ಲೇಖಿ ಬರುವುದಿಲ್ಲ ಎಂಬ ವಿಚಾರ ತಿಳಿದ ಜಿಲ್ಲಾ ಬಿಜೆಪಿ ಕೊನೆಕ್ಷಣದಲ್ಲಿ ಭಾನುವಾರ ಸಂಜೆ ಕಾರ್ಯಕ್ರಮವನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಿರುವುದಾಗಿ ಪ್ರಕಟಿಸಿದೆ. ಶನಿವಾರ ಪ್ರಕಟವಾದ 195 ಅಭ್ಯರ್ಥಿಗಳಲ್ಲಿ ದೆಹಲಿಯ ನಾಲ್ವರು ಸಂಸದರಿಗೆ ಕೊಕ್ ನೀಡಲಾಗಿದೆ. ಅದರಲ್ಲಿ ಹಾಲಿ ವಿದೇಶಾಂಗ ಇಲಾಖೆಯ ಸಹಾಯಕ ಸಚಿವೆಯಾಗಿರುವ ಮೀನಾಕ್ಷಿ ಲೇಖಿ ಕೂಡ ಒಬ್ಬರಾಗಿದ್ದಾರೆ.
ಸುಪ್ರೀಂ ಕೋರ್ಟ್ ವಕೀಲರೂ ಆಗಿರುವ ಮೀನಾಕ್ಷಿ ಲೇಖಿ 2014 ಮತ್ತು 2019ರಲ್ಲಿ ದೆಹಲಿ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ. ಈ ಬಾರಿ ವಿರೋಧಿ ಅಲೆ ಎದುರಿಸುತ್ತಿರುವ ಕಾರಣದಿಂದಾಗಿ ಲೇಖಿ ಅವರನ್ನು ಬದಲಿಸಲಾಗಿದ್ದು, ಆ ಸ್ಥಾನವನ್ನು ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಮಗಳು 39 ವರ್ಷದ ಬಾನ್ಸುರಿ ಸ್ವರಾಜ್ ಅವರಿಗೆ ನೀಡಲಾಗಿದೆ. ಇದರಿಂದ ಸಿಟ್ಟಿನಲ್ಲಿರುವ ಮೀನಾಕ್ಷಿ ಲೇಖಿ ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.
ಮಂಗಳೂರಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಬೃಹತ್ ಸಮಾವೇಶ ಆಗಿದ್ದರಿಂದ ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗಿತ್ತು. ಉಡುಪಿಯಲ್ಲೂ ಚಿಂತನ ಗಂಗ ಹೆಸರಿನಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್ ಸಿಂಗ್ ಅವರಿಗೂ ದೆಹಲಿಯಲ್ಲಿ ಟಿಕೆಟ್ ಮಿಸ್ ಆಗಿದೆ. ಟಿಕೆಟ್ ತಪ್ಪಿದ ಸಂಸದರನ್ನು ದೆಹಲಿಯಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಲು ಕಳಿಸುವ ಸಾಧ್ಯತೆಯಿದೆ.
Union Minister and two-time MP Meenakshi Lekhi has failed to get a BJP ticket from Delhi Central constituency. Angry over not getting a seat, he stayed away from the district convention of booth-level workers organised in Mangaluru and the programme was cancelled at the last minute.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm