ಬ್ರೇಕಿಂಗ್ ನ್ಯೂಸ್
04-03-24 10:14 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಗಟ್ಟಿ ಸಮುದಾಯದವರು ಸೋಮೇಶ್ವರ ಸೋಮನಾಥ ದೇವಸ್ಥಾನವನ್ನ ನಮ್ಮದೆಂದು ಹೇಳುತ್ತಲೇ ಹೋರಾಟ ನಡೆಸಿದ್ದಲ್ಲದೆ ನಾವು ಲಾಸು, ಲಾಸು ಅಂತ ಅಳುತ್ತಿದ್ದರು. ಅದಕ್ಕಾಗಿಯೇ ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಿದ್ದೆ. ನಾನು ಅಂದು ತೆಗೆದ ನಿರ್ಧಾರ ಸರಿಯಾಗಿದೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ವಿಚಾರದಲ್ಲಿ ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜ ಬಾಂಧವರಿಗೆ ಅವಹೇಳನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಮಾಧ್ಯಮದ ಮುಂದೆ ಮಾತನಾಡಿದ್ದ ಸದಾಶಿವ ಅವರು ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಗಟ್ಟಿ ಸಮುದಾಯದವರು ಯಾವಾಗಲೂ ನಮ್ಮದೆಂದು ಹೇಳಿ ಹೋರಾಟ ಮಾಡುತ್ತಿದ್ದರು. ವಾರ್ಷಿಕ ಜಾತ್ರೆ ಮುಗಿದ ನಂತರವೂ ಲಾಸು, ಲಾಸಂತ ಹೇಳುತ್ತಿದ್ದರು. ನನಗೆ ಊರವರು, ಭಕ್ತಾಧಿಗಳ ಒತ್ತಡ ಬಂದ ಹಿನ್ನಲೆಯಲ್ಲಿ ದೇವಸ್ಥಾನವನ್ನ ಅಂದು ಮುಜರಾಯಿ ಇಲಾಖೆಯ ಅಧೀನಕ್ಕೆ ಸೇರಿಸಿದ್ದೆ. ಅಂದು ನಾನು ತೆಗೆದ ನಿರ್ಧಾರವು ಸರಿಯಾಗಿದೆ. ಈವಾಗ ಸೋಮನಾಥ ಕ್ಷೇತ್ರವು ಎಷ್ಟು ಅಭಿವೃದ್ಧಿಗೊಂಡಿದೆ ಎಂದು ಸದಾಶಿವ ಉಳ್ಳಾಲ್ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಅದರ ವೀಡಿಯೋ ವೈರಲ್ ಆಗಿದೆ. ಸದಾಶಿವ ಉಳ್ಳಾಲ್ ಅವರಿಗೆ ಕಳೆದ ವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿತ್ತು.
ತಮ್ಮ ಜಾತಿಯ ಹೆಸರೆತ್ತಿ ತುಚ್ಚವಾಗಿ ಮಾತನಾಡಿದ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಉರಿದು ಬಿದ್ದಿದ್ದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Mangalore kondana temple, Ullal Block Congress president sadashiv ullal statement sparks controversy among Gatti community.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm