ಬ್ರೇಕಿಂಗ್ ನ್ಯೂಸ್
04-03-24 10:14 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಗಟ್ಟಿ ಸಮುದಾಯದವರು ಸೋಮೇಶ್ವರ ಸೋಮನಾಥ ದೇವಸ್ಥಾನವನ್ನ ನಮ್ಮದೆಂದು ಹೇಳುತ್ತಲೇ ಹೋರಾಟ ನಡೆಸಿದ್ದಲ್ಲದೆ ನಾವು ಲಾಸು, ಲಾಸು ಅಂತ ಅಳುತ್ತಿದ್ದರು. ಅದಕ್ಕಾಗಿಯೇ ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಿದ್ದೆ. ನಾನು ಅಂದು ತೆಗೆದ ನಿರ್ಧಾರ ಸರಿಯಾಗಿದೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ವಿಚಾರದಲ್ಲಿ ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜ ಬಾಂಧವರಿಗೆ ಅವಹೇಳನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಮಾಧ್ಯಮದ ಮುಂದೆ ಮಾತನಾಡಿದ್ದ ಸದಾಶಿವ ಅವರು ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಗಟ್ಟಿ ಸಮುದಾಯದವರು ಯಾವಾಗಲೂ ನಮ್ಮದೆಂದು ಹೇಳಿ ಹೋರಾಟ ಮಾಡುತ್ತಿದ್ದರು. ವಾರ್ಷಿಕ ಜಾತ್ರೆ ಮುಗಿದ ನಂತರವೂ ಲಾಸು, ಲಾಸಂತ ಹೇಳುತ್ತಿದ್ದರು. ನನಗೆ ಊರವರು, ಭಕ್ತಾಧಿಗಳ ಒತ್ತಡ ಬಂದ ಹಿನ್ನಲೆಯಲ್ಲಿ ದೇವಸ್ಥಾನವನ್ನ ಅಂದು ಮುಜರಾಯಿ ಇಲಾಖೆಯ ಅಧೀನಕ್ಕೆ ಸೇರಿಸಿದ್ದೆ. ಅಂದು ನಾನು ತೆಗೆದ ನಿರ್ಧಾರವು ಸರಿಯಾಗಿದೆ. ಈವಾಗ ಸೋಮನಾಥ ಕ್ಷೇತ್ರವು ಎಷ್ಟು ಅಭಿವೃದ್ಧಿಗೊಂಡಿದೆ ಎಂದು ಸದಾಶಿವ ಉಳ್ಳಾಲ್ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಅದರ ವೀಡಿಯೋ ವೈರಲ್ ಆಗಿದೆ. ಸದಾಶಿವ ಉಳ್ಳಾಲ್ ಅವರಿಗೆ ಕಳೆದ ವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿತ್ತು.
ತಮ್ಮ ಜಾತಿಯ ಹೆಸರೆತ್ತಿ ತುಚ್ಚವಾಗಿ ಮಾತನಾಡಿದ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಉರಿದು ಬಿದ್ದಿದ್ದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Mangalore kondana temple, Ullal Block Congress president sadashiv ullal statement sparks controversy among Gatti community.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm