ಬ್ರೇಕಿಂಗ್ ನ್ಯೂಸ್
05-03-24 03:41 pm Mangalore Correspondent ಕರಾವಳಿ
ಉಳ್ಳಾಲ, ಮಾ.5: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿಯಲ್ಲಿ ಚಲಿಸುತ್ತಿದ್ದ ಸ್ಕೂಟರ್ಗೆ ಡಿಕ್ಕಿಯಾಗಿದ್ದು ಪರಿಣಾಮ ಸ್ಕೂಟರ್ ಸವಾರ ಡಿವೈಡರ್ಗೆ ಎಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಎದುರುಗಡೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ಸಂತೋಷ್ ಬೆಳ್ಚಾಡ ( 48) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿ. ಬಾಳೆಹಣ್ಣಿನ ವ್ಯಾಪಾರಿಯಾಗಿದ್ದ ಅವರು ವ್ಯಾಪಾರ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಥಾರ್ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬೆಲೆನೋ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕಾರು ಎದುರಿನಲ್ಲಿ ತೆರಳುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ. ಸ್ಕೂಟರ್ ಹೆದ್ದಾರಿಯ ಡಿವೈಡರ್ ಗೆ ಬಡಿದ ಪರಿಣಾಮ ಸವಾರ ಸಂತೋಷ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸೋ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ವಿವಾಹಿತರಾಗಿದ್ದ ಸಂತೋಷ್ ಬಡ ಕುಟುಂಬದವರಾಗಿದ್ದು ತಂದೆ, ತಾಯಿ, ಪತ್ನಿ ಇಬ್ಬರು ಹೆಣ್ಮಕ್ಕಳ ಕುಟುಂಬದ ಆಧಾರ ಸ್ಥಂಬವಾಗಿದ್ದರು.






ಗಾಂಜಾ ನಶೆಯಿಂದ ಘಟನೆ, ಕಾಯಂ ಸಂಚಾರಿ ಪೊಲೀಸ್, ಬ್ಯಾರಿಕೇಡ್ ಅಳವಡಿಸಲು ಒತ್ತಾಯ ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಕೊಲ್ಯ ನಿವಾಸಿಗಳು ತಕ್ಷಣವೇ ಸ್ಥಳದಲ್ಲಿ ಕಾಯಂ ಸಂಚಾರಿ ಪೊಲೀಸರು, ಹೆದ್ದಾರಿಗೆ ಬ್ಯಾರಿಕೇಡ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇದೆ. ಪೊಲೀಸರು ಯಾವುದೇ ಕ್ರಮ ವಹಿಸುತ್ತಿಲ್ಲ. ಇಂದು ನಡೆದಿರುವ ಅಪಘಾತಕ್ಕೆ ಗಾಂಜಾ ನಶೆಯೇ ಕಾರಣ. ಜೀಪಿನಲ್ಲಿದ್ದ ಮೂವರು ಯುವಕರು ನಶೆಯಲ್ಲಿದ್ದ ಕಾರಣ ಘಟನೆ ನಡೆದಿದೆ. ತಕ್ಷಣವೇ ಮೂವರನ್ನು ತನಿಖೆಗೆ ಒಳಪಡಿಸಿ ಮೃತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಸ್ಥಳೀಯ ನಿವಾಸಿ ಶೇಖರ್ ಕನೀರುತೋಟ ಆಗ್ರಹಿಸಿದ್ದಾರೆ.
Mangalore accident, 48 year old man killed after jeep rams near Kolya Narayana Guru mandir. Youths who were drunk have said to rammed the two wheeler. The deceased has been identified as Santosh from Kolya kannirthota.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm