ಬ್ರೇಕಿಂಗ್ ನ್ಯೂಸ್
05-03-24 04:11 pm Mangalore Correspondent ಕರಾವಳಿ
ಪುತ್ತೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರು ಎಂಬಲ್ಲಿನ ಮನೆಯೊಂದಕ್ಕೆ ಮಂಗಳವಾರ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಮಂದಿಯನ್ನು ವಿಚಾರಣೆ ನಡೆಸಿದ್ದಾರೆ.
ಕೇರಳ ಮೂಲದ ಬಿಜು ಅಬ್ರಹಾಂ ಎಂಬಾತ ಎಣ್ಮೂರಿನ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಕಳೆದ ಜುಲೈ ತಿಂಗಳಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಏಳು ಪಿಸ್ತೂಲ್ ಮತ್ತು ಸಜೀವ ಗುಂಡು ಸಹಿತ ಐವರು ಹಳೆ ಆರೋಪಿಗಳು ಸಿಕ್ಕಿಬಿದ್ದಿರುವುದು ಮತ್ತು ಅವರಿಗೆ ಲಷ್ಕರ್ ಉಗ್ರರ ಜೊತೆ ಲಿಂಕ್ ಇರುವುದು ಪತ್ತೆಯಾಗಿತ್ತು.
ಆರೋಪಿಗಳಿಗೆ ಬಿಜು ಅಬ್ರಹಾಂ ಆಶ್ರಯ ಕೊಟ್ಟಿದ್ದಾನೆಂಬ ಆರೋಪದಲ್ಲಿ ಆತನ ಮನೆಯನ್ನು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಐವರು ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ಉಗ್ರವಾದದ ಲಿಂಕ್ ಇರುವ ಹಿನ್ನೆಲೆಯಲ್ಲಿ ತನಿಖೆಯನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು. ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಎನ್ಐಎ ಅಧಿಕಾರಿಗಳು ಹಳೆ ಕೇಸುಗಳನ್ನು ತಾಳೆ ಹಾಕಿ ನೋಡುತ್ತಿದ್ದು, ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಬೆಂಗಳೂರಿನ ಜೈಲಿನಲ್ಲಿದ್ದ ಶಂಕಿತ ಲಷ್ಕರ್ ಉಗ್ರರ ಪ್ರೇರಣೆಯಲ್ಲಿ ಐವರು ಆರೋಪಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದರು ಎನ್ನುವ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಬೆಂಗಳೂರಿನ ಹೊಟೇಲಿನಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಟ್ಟು ಹೋಗಿರುವುದು ಭಾರೀ ಗಾಬರಿ ಹುಟ್ಟಿಸಿರುವುದರಿಂದ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.
NIA officers raid to Kadaba in Mangalore, search for Biju Abraham over terror link.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm