ಬ್ರೇಕಿಂಗ್ ನ್ಯೂಸ್
05-03-24 04:11 pm Mangalore Correspondent ಕರಾವಳಿ
ಪುತ್ತೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರು ಎಂಬಲ್ಲಿನ ಮನೆಯೊಂದಕ್ಕೆ ಮಂಗಳವಾರ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಮಂದಿಯನ್ನು ವಿಚಾರಣೆ ನಡೆಸಿದ್ದಾರೆ.
ಕೇರಳ ಮೂಲದ ಬಿಜು ಅಬ್ರಹಾಂ ಎಂಬಾತ ಎಣ್ಮೂರಿನ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಕಳೆದ ಜುಲೈ ತಿಂಗಳಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಏಳು ಪಿಸ್ತೂಲ್ ಮತ್ತು ಸಜೀವ ಗುಂಡು ಸಹಿತ ಐವರು ಹಳೆ ಆರೋಪಿಗಳು ಸಿಕ್ಕಿಬಿದ್ದಿರುವುದು ಮತ್ತು ಅವರಿಗೆ ಲಷ್ಕರ್ ಉಗ್ರರ ಜೊತೆ ಲಿಂಕ್ ಇರುವುದು ಪತ್ತೆಯಾಗಿತ್ತು.
ಆರೋಪಿಗಳಿಗೆ ಬಿಜು ಅಬ್ರಹಾಂ ಆಶ್ರಯ ಕೊಟ್ಟಿದ್ದಾನೆಂಬ ಆರೋಪದಲ್ಲಿ ಆತನ ಮನೆಯನ್ನು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಐವರು ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ಉಗ್ರವಾದದ ಲಿಂಕ್ ಇರುವ ಹಿನ್ನೆಲೆಯಲ್ಲಿ ತನಿಖೆಯನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು. ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಎನ್ಐಎ ಅಧಿಕಾರಿಗಳು ಹಳೆ ಕೇಸುಗಳನ್ನು ತಾಳೆ ಹಾಕಿ ನೋಡುತ್ತಿದ್ದು, ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಬೆಂಗಳೂರಿನ ಜೈಲಿನಲ್ಲಿದ್ದ ಶಂಕಿತ ಲಷ್ಕರ್ ಉಗ್ರರ ಪ್ರೇರಣೆಯಲ್ಲಿ ಐವರು ಆರೋಪಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದರು ಎನ್ನುವ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಬೆಂಗಳೂರಿನ ಹೊಟೇಲಿನಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಟ್ಟು ಹೋಗಿರುವುದು ಭಾರೀ ಗಾಬರಿ ಹುಟ್ಟಿಸಿರುವುದರಿಂದ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.
NIA officers raid to Kadaba in Mangalore, search for Biju Abraham over terror link.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:43 pm
HK News Staffer
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm