ಬ್ರೇಕಿಂಗ್ ನ್ಯೂಸ್
05-03-24 04:11 pm Mangalore Correspondent ಕರಾವಳಿ
ಪುತ್ತೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರು ಎಂಬಲ್ಲಿನ ಮನೆಯೊಂದಕ್ಕೆ ಮಂಗಳವಾರ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಮಂದಿಯನ್ನು ವಿಚಾರಣೆ ನಡೆಸಿದ್ದಾರೆ.
ಕೇರಳ ಮೂಲದ ಬಿಜು ಅಬ್ರಹಾಂ ಎಂಬಾತ ಎಣ್ಮೂರಿನ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಕಳೆದ ಜುಲೈ ತಿಂಗಳಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಏಳು ಪಿಸ್ತೂಲ್ ಮತ್ತು ಸಜೀವ ಗುಂಡು ಸಹಿತ ಐವರು ಹಳೆ ಆರೋಪಿಗಳು ಸಿಕ್ಕಿಬಿದ್ದಿರುವುದು ಮತ್ತು ಅವರಿಗೆ ಲಷ್ಕರ್ ಉಗ್ರರ ಜೊತೆ ಲಿಂಕ್ ಇರುವುದು ಪತ್ತೆಯಾಗಿತ್ತು.
ಆರೋಪಿಗಳಿಗೆ ಬಿಜು ಅಬ್ರಹಾಂ ಆಶ್ರಯ ಕೊಟ್ಟಿದ್ದಾನೆಂಬ ಆರೋಪದಲ್ಲಿ ಆತನ ಮನೆಯನ್ನು ಅಧಿಕಾರಿಗಳು ಶೋಧ ನಡೆಸಿದ್ದಾರೆ. ಐವರು ಆರೋಪಿಗಳನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ಉಗ್ರವಾದದ ಲಿಂಕ್ ಇರುವ ಹಿನ್ನೆಲೆಯಲ್ಲಿ ತನಿಖೆಯನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು. ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಎನ್ಐಎ ಅಧಿಕಾರಿಗಳು ಹಳೆ ಕೇಸುಗಳನ್ನು ತಾಳೆ ಹಾಕಿ ನೋಡುತ್ತಿದ್ದು, ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಬೆಂಗಳೂರಿನ ಜೈಲಿನಲ್ಲಿದ್ದ ಶಂಕಿತ ಲಷ್ಕರ್ ಉಗ್ರರ ಪ್ರೇರಣೆಯಲ್ಲಿ ಐವರು ಆರೋಪಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದರು ಎನ್ನುವ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಬೆಂಗಳೂರಿನ ಹೊಟೇಲಿನಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಟ್ಟು ಹೋಗಿರುವುದು ಭಾರೀ ಗಾಬರಿ ಹುಟ್ಟಿಸಿರುವುದರಿಂದ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.
NIA officers raid to Kadaba in Mangalore, search for Biju Abraham over terror link.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm