ಬ್ರೇಕಿಂಗ್ ನ್ಯೂಸ್
05-03-24 04:28 pm Mangalore Correspondent ಕರಾವಳಿ
ಉಳ್ಳಾಲ, ಮಾ.5: ಗಟ್ಟಿ ಸಮುದಾಯದವರ ಬಗ್ಗೆ ಕ್ಷುಲ್ಲಕವಾಗಿ ಹೇಳಿಕೆ ನೀಡಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ತಿರುಗಿ ಬಿದ್ದಿದ್ದು ಸದಾಶಿವ ಉಳ್ಳಾಲ್ ಅವರು ತಕ್ಷಣ ಬಹಿರಂಗ ಕ್ಷಮೆ ಯಾಚಿಸದಿದ್ದರೆ ಅವರ ಮನೆ, ಕಚೇರಿಯೆದುರು ಉಗ್ರ ಪ್ರತಿಭಟನೆ ನಡೆಸೋದಾಗಿ ಎಚ್ವರಿಸಿದ್ದಾರೆ.
ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜವನ್ನು ಬೊಟ್ಟು ಮಾಡಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿತ್ತು.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ಬಲ್ಲಿ ಈ ಬಗ್ಗೆ ಗಟ್ಟಿ ಸಮಾಜದ ಪ್ರಮುಖರು ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಪ್ರಮುಖರಾದ ಪವಿತ್ರ ಗಟ್ಟಿ ಮಾತನಾಡಿ ನಮ್ಮ ಸಮುದಾಯವನ್ನ ಬಹಿರಂಗವಾಗಿ ಅವಹೇಳನ ಮಾಡಿದ ಸದಾಶಿವ ಉಳ್ಳಾಲ್ ಅವರು ತಕ್ಷಣವೇ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರ ಮನೆ, ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.




ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ವಿಶ್ವನಾಥ ಗಟ್ಟಿ ಮಾತನಾಡಿ ಕೊಂಡಾಣ ಕ್ಷೇತ್ರದಲ್ಲಿ ನಡೆದಿದ್ದ ಗಲಾಟೆ ವಿಚಾರದಲ್ಲಿ ಸದಾಶಿವ ಉಳ್ಳಾಲ್ ಅವರು ನಮ್ಮ ಸಮಾಜವನ್ನ ವಿನಾಕಾರಣ ಎಳೆ ತಂದು ಅವಮಾನಿಸುವ ಹೇಳಿಕೆ ನೀಡಿರುವುದು ಖಂಡನೀಯ. 1930 ಇಸವಿಯಿಂದ 1988 ಇಸವಿಯ ವರೆಗೆ ಗಟ್ಟಿ ಸಮಾಜದವರೇ ಸೋಮನಾಥ ದೇವಸ್ಥಾನದ ಆಡಳಿತ ನಡೆಸಿದ್ದು, ಕ್ಷೇತ್ರದಲ್ಲಿ ನಡೆಯುವ ಪಂಚ ಪರ್ವ, ವಾರ್ಷಿಕ ಉತ್ಸವಗಳನ್ನ ಸಮಾಜದ ಜನರ ಸಹಕಾರದೊಂದಿಗೆ ಅತ್ಯಂತ ಸುಂದರವಾಗಿ ನಡೆಸಿಕೊಂಡು ಬರುತ್ತಿದ್ದರು. ಅಂದಿನ ಕಾಲದಲ್ಲಿ ಬಹಳ ಕಷ್ಟದಲ್ಲಿ ಸಮುದಾಯದವರ ಪ್ರತೀ ಮನೆಯಿಂದಲೂ ಒಂದು ಮುಷ್ಟಿ ಅಕ್ಕಿ, ಒಂದು ಗಿಂಡೆ ಎಲ್ಲೆಣ್ಣೆಯನ್ನು ಕುಲ ಸ್ವಾಮಿ ಸೋಮನಾಥನಿಗೆ ಅರ್ಪಿಸುತ್ತಿದ್ದರು. ಸೋಮನಾಥನಿಲ್ಲದೆ ಗಟ್ಟಿ ಸಮಾಜವಿಲ್ಲ ಎಂಬ ನಂಬಿಕೆ ನಮ್ಮದು. ಈಗಲೂ ಸೋಮನಾಥನ ವಾರ್ಷಿಕ ಜಾತ್ರೆಗೆ ಗಟ್ಟಿ ಸಮಾಜ ಬಾಂಧವರು ಮನೆ, ಮನೆಯಿಂದ ದೇಣಿಗೆ ಸಂಗ್ರಹಿಸಿ ಹೊರೆ ಕಾಣಿಕೆ ಅರ್ಪಿಸುತ್ತಾರೆ. ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜದ ಮೇಲೆ ಮಾಡಿರುವ ಆರೋಪ ನಮ್ಮ ಲೋಪದಿಂದ ಆಗಿರುವುದಲ್ಲ. ನಮ್ಮದೇ ಹಿಂದೂ ಬಾಂಧವರ ಕೆಲವು ವಿಕೃತ ಮನಸ್ಥಿತಿಯ ಜನರಿಂದ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಗಟ್ಟಿ ಸಮಾಜದ ನಾಯ್ಗರಾದ ಹರೀಶ್ಚಂದ್ರ ಗಟ್ಟಿ ಬೊಂಬಾಯಿ ಮನೆ, ಮೇಲ್ಡರಾದ ಯಾದವ ಗಟ್ಟಿ, ಪ್ರಮುಖರಾದ ಜಯರಾಮ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Mangalore Gatti community warns of protest for controversial remkars by sadashiv ullal on kondana temple row.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm