ಬ್ರೇಕಿಂಗ್ ನ್ಯೂಸ್
05-03-24 07:30 pm Mangalore Correspondent ಕರಾವಳಿ
ಮಂಗಳೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಾಹಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ.
ಆರೋಪಿ ಬಿಜು ಅಬ್ರಾಹಂ, ಎಣ್ಮೂರಿನಲ್ಲಿ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜುವನ್ನು ಬಂಧಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರೋಪಿಗಳಿಗೆ ಬಿಜು ಅಬ್ರಾಹಂ ಆಶ್ರಯ ನೀಡಿದ್ದ ಎಂಬ ಆರೋಪದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಿಜು ಮನೆಯಲ್ಲಿ ಏಕಾಏಕಿ ದಾಳಿ ನಡೆಸಿ ಶೋಧ ನಡೆಸಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವಾಗಲೇ ಎನ್ಐಎ ಅಧಿಕಾರಿಗಳು ಏಕಕಾಲದಲ್ಲಿ ಏಳು ರಾಜ್ಯಗಳ 17 ಕಡೆಗಳಲ್ಲಿ ದಾಳಿ ನಡೆಸಿದ್ದರು. ಅದರಲ್ಲಿ ಕಡಬದ ಈ ದಾಳಿಯೂ ಒಂದಾಗಿದ್ದು, ಬೆಂಗಳೂರಿನ ಸ್ಫೋಟ ಘಟನೆಗೆ ಸಂಬಂಧ ಇದೆಯೇ ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಬೆಂಗಳೂರಿನ ಜೈಲಿನಲ್ಲಿರುವ ಲಷ್ಕರ್ ಉಗ್ರರಿಂದ ಪ್ರೇರಿತಗೊಂಡು ವಿಧ್ವಂಸಕ ದಾಳಿಗೆ ಐವರು ಆರೋಪಿಗಳು ಸಂಚು ಹೂಡಿದ್ದರು ಎನ್ನುವ ಕೇಂದ್ರೀಯ ಏಜನ್ಸಿಗಳ ಮಾಹಿತಿ ಆಧರಿಸಿ ಬೆಂಗಳೂರು ಪೊಲೀಸರು ಕಳೆದ ಜುಲೈ ತಿಂಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆನಂತರ, ಪ್ರಕರಣ ಎನ್ಐಎಗೆ ಹಸ್ತಾಂತರ ಆಗಿತ್ತು.
Mangalore Kadaba Nia Raid, Biju Abraham arrested by NIA officers, taken to Bangalore. He has been arrested over giving shelter to terrorist to conduct terror activities in state of Karnataka.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm