ಬ್ರೇಕಿಂಗ್ ನ್ಯೂಸ್
07-03-24 06:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಜಮೀನು ನಕ್ಷೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರು ತಾಲೂಕು ಕಚೇರಿಯ ಭೂಮಾಪನ ಕಚೇರಿಯ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ದಾಳಿಗೈದು 4 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸರ್ವೇಯರನ್ನು ಬಂಧಿಸಿದ್ದಾರೆ. ಭೂಮಾಪನ ಕಚೇರಿಯ ಸರ್ವೇಯರ್ ಶೀತಲ್ ರಾಜ್ ಸಿಕ್ಕಿಬಿದ್ದವರು.
ಜಮೀನು ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮ ಪ್ರಕಾರ, ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಮುಖಾಂತರ ತೆಗೆಯಬೇಕಿರುತ್ತದೆ. ಜಮೀನಿಗೆ ಸಂಬಂಧಪಟ್ಟ ಗುರುಪುರ ಹೋಬಳಿಯ ನೀರುಮಾರ್ಗ ಗ್ರಾಮದ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷವಾಗಿದ್ದು ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ರಾಜೇಶ್ ಎಂಬ ಸಂಬಂಧಿಕ ವ್ಯಕ್ತಿ ಅರ್ಜಿ ಹಾಕಿದ್ದರು. ಸ್ಟೆಲ್ಲಾ ಜಾನೆಟ್ ವಾಸ್ ಎಂಬವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಲ್ಲದೆ, ಅದಕ್ಕಾಗಿ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು.
ಫೆಬ್ರವರಿ 29 ರಂದು ಮಂಗಳೂರಿನ ಸರ್ವೇ ಇಲಾಖೆಯಲ್ಲಿ ಕೆಲಸ ಮಾಡುವ ಶೀತಲ್ ರಾಜ್ ಎಂಬ ಸರ್ವೆಯರ್ ಜಮೀನಿನ ಸರ್ವೆ ನಡೆಸಿ ಸ್ಥಳ ಮಹಜರು ಮಾಡಿದ್ದರು. ಬಳಿಕ ಜಮೀನಿನ ನಕ್ಷೆ ನೀಡಲು ಸ್ವಲ್ಪ ಖರ್ಚಿದೆ ಎಂದು ಹೇಳಿದ್ದು 5 ಸಾವಿರ ಕೊಡುವಂತೆ ಬೇಡಿಕೆ ಇರಿಸಿದ್ದರು. ಬಳಿಕ ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ನಾಲ್ಕು ಸಾವಿರ ರೂ.ಗೆ ಇಳಿಸಿದ್ದರು. ಈ ಬಗ್ಗೆ ನೊಂದ ಅರ್ಜಿದಾರ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಾಲ್ಕು ಸಾವಿರ ಲಂಚದ ಹಣ ಸ್ವೀಕಾರ ಮಾಡುವಾಗಲೇ ಲೋಕಾಯುಕ್ತ ಪೊಲೀಸರು ಆರೋಪಿ ಶೀತಲ್ ರಾಜ್ ನನ್ನು ಬಂಧಿಸಿದ್ದಾರೆ. ಎಸ್ಪಿ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಚೆಲುವರಾಜು, ಗಾನ ಪಿ. ಕುಮಾರ್ ಕಾರ್ಯಾಚರಣೆ ನಡೆಸಿದ್ದರು.
Four thousand bribe, Mangalore surveyor sheethal Raj caught by Lokayukta at Mini vidhana soudha.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm