ಬ್ರೇಕಿಂಗ್ ನ್ಯೂಸ್
07-03-24 06:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಜಮೀನು ನಕ್ಷೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರು ತಾಲೂಕು ಕಚೇರಿಯ ಭೂಮಾಪನ ಕಚೇರಿಯ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ದಾಳಿಗೈದು 4 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸರ್ವೇಯರನ್ನು ಬಂಧಿಸಿದ್ದಾರೆ. ಭೂಮಾಪನ ಕಚೇರಿಯ ಸರ್ವೇಯರ್ ಶೀತಲ್ ರಾಜ್ ಸಿಕ್ಕಿಬಿದ್ದವರು.
ಜಮೀನು ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮ ಪ್ರಕಾರ, ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಮುಖಾಂತರ ತೆಗೆಯಬೇಕಿರುತ್ತದೆ. ಜಮೀನಿಗೆ ಸಂಬಂಧಪಟ್ಟ ಗುರುಪುರ ಹೋಬಳಿಯ ನೀರುಮಾರ್ಗ ಗ್ರಾಮದ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷವಾಗಿದ್ದು ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ರಾಜೇಶ್ ಎಂಬ ಸಂಬಂಧಿಕ ವ್ಯಕ್ತಿ ಅರ್ಜಿ ಹಾಕಿದ್ದರು. ಸ್ಟೆಲ್ಲಾ ಜಾನೆಟ್ ವಾಸ್ ಎಂಬವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಲ್ಲದೆ, ಅದಕ್ಕಾಗಿ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು.
ಫೆಬ್ರವರಿ 29 ರಂದು ಮಂಗಳೂರಿನ ಸರ್ವೇ ಇಲಾಖೆಯಲ್ಲಿ ಕೆಲಸ ಮಾಡುವ ಶೀತಲ್ ರಾಜ್ ಎಂಬ ಸರ್ವೆಯರ್ ಜಮೀನಿನ ಸರ್ವೆ ನಡೆಸಿ ಸ್ಥಳ ಮಹಜರು ಮಾಡಿದ್ದರು. ಬಳಿಕ ಜಮೀನಿನ ನಕ್ಷೆ ನೀಡಲು ಸ್ವಲ್ಪ ಖರ್ಚಿದೆ ಎಂದು ಹೇಳಿದ್ದು 5 ಸಾವಿರ ಕೊಡುವಂತೆ ಬೇಡಿಕೆ ಇರಿಸಿದ್ದರು. ಬಳಿಕ ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ನಾಲ್ಕು ಸಾವಿರ ರೂ.ಗೆ ಇಳಿಸಿದ್ದರು. ಈ ಬಗ್ಗೆ ನೊಂದ ಅರ್ಜಿದಾರ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಾಲ್ಕು ಸಾವಿರ ಲಂಚದ ಹಣ ಸ್ವೀಕಾರ ಮಾಡುವಾಗಲೇ ಲೋಕಾಯುಕ್ತ ಪೊಲೀಸರು ಆರೋಪಿ ಶೀತಲ್ ರಾಜ್ ನನ್ನು ಬಂಧಿಸಿದ್ದಾರೆ. ಎಸ್ಪಿ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಚೆಲುವರಾಜು, ಗಾನ ಪಿ. ಕುಮಾರ್ ಕಾರ್ಯಾಚರಣೆ ನಡೆಸಿದ್ದರು.
Four thousand bribe, Mangalore surveyor sheethal Raj caught by Lokayukta at Mini vidhana soudha.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm