ಬ್ರೇಕಿಂಗ್ ನ್ಯೂಸ್
07-03-24 06:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಜಮೀನು ನಕ್ಷೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರು ತಾಲೂಕು ಕಚೇರಿಯ ಭೂಮಾಪನ ಕಚೇರಿಯ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ದಾಳಿಗೈದು 4 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸರ್ವೇಯರನ್ನು ಬಂಧಿಸಿದ್ದಾರೆ. ಭೂಮಾಪನ ಕಚೇರಿಯ ಸರ್ವೇಯರ್ ಶೀತಲ್ ರಾಜ್ ಸಿಕ್ಕಿಬಿದ್ದವರು.
ಜಮೀನು ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮ ಪ್ರಕಾರ, ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಮುಖಾಂತರ ತೆಗೆಯಬೇಕಿರುತ್ತದೆ. ಜಮೀನಿಗೆ ಸಂಬಂಧಪಟ್ಟ ಗುರುಪುರ ಹೋಬಳಿಯ ನೀರುಮಾರ್ಗ ಗ್ರಾಮದ ಲಿಲ್ಲಿ ಪೀಟರ್ ವಾಸ್ ಅವರಿಗೆ 72 ವರ್ಷವಾಗಿದ್ದು ಆರೋಗ್ಯ ಸರಿ ಇಲ್ಲದ ಕಾರಣ ಅವರ ಪರವಾಗಿ ರಾಜೇಶ್ ಎಂಬ ಸಂಬಂಧಿಕ ವ್ಯಕ್ತಿ ಅರ್ಜಿ ಹಾಕಿದ್ದರು. ಸ್ಟೆಲ್ಲಾ ಜಾನೆಟ್ ವಾಸ್ ಎಂಬವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಲ್ಲದೆ, ಅದಕ್ಕಾಗಿ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು.
ಫೆಬ್ರವರಿ 29 ರಂದು ಮಂಗಳೂರಿನ ಸರ್ವೇ ಇಲಾಖೆಯಲ್ಲಿ ಕೆಲಸ ಮಾಡುವ ಶೀತಲ್ ರಾಜ್ ಎಂಬ ಸರ್ವೆಯರ್ ಜಮೀನಿನ ಸರ್ವೆ ನಡೆಸಿ ಸ್ಥಳ ಮಹಜರು ಮಾಡಿದ್ದರು. ಬಳಿಕ ಜಮೀನಿನ ನಕ್ಷೆ ನೀಡಲು ಸ್ವಲ್ಪ ಖರ್ಚಿದೆ ಎಂದು ಹೇಳಿದ್ದು 5 ಸಾವಿರ ಕೊಡುವಂತೆ ಬೇಡಿಕೆ ಇರಿಸಿದ್ದರು. ಬಳಿಕ ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ನಾಲ್ಕು ಸಾವಿರ ರೂ.ಗೆ ಇಳಿಸಿದ್ದರು. ಈ ಬಗ್ಗೆ ನೊಂದ ಅರ್ಜಿದಾರ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಾಲ್ಕು ಸಾವಿರ ಲಂಚದ ಹಣ ಸ್ವೀಕಾರ ಮಾಡುವಾಗಲೇ ಲೋಕಾಯುಕ್ತ ಪೊಲೀಸರು ಆರೋಪಿ ಶೀತಲ್ ರಾಜ್ ನನ್ನು ಬಂಧಿಸಿದ್ದಾರೆ. ಎಸ್ಪಿ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಚೆಲುವರಾಜು, ಗಾನ ಪಿ. ಕುಮಾರ್ ಕಾರ್ಯಾಚರಣೆ ನಡೆಸಿದ್ದರು.
Four thousand bribe, Mangalore surveyor sheethal Raj caught by Lokayukta at Mini vidhana soudha.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm