ಬ್ರೇಕಿಂಗ್ ನ್ಯೂಸ್
07-03-24 09:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಸೌದಿ ಅರೇಬಿಯಾದ ದಮಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು 18 ಗಂಟೆ ಕಳೆದರೂ ಪ್ರಯಾಣ ಆರಂಭಿಸದ ಬಗ್ಗೆ ಪ್ರಯಾಣಿಕರು ತೊಂದರೆ ಅನುಭವಿಸಿದ್ದು ವಿಮಾನ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾತ್ರಿ 10:20 ಕ್ಕೆ ಟೇಕಾಫ್ ಆಗಬೇಕಿದ್ದ ವಿಮಾನವು ಗುರುವಾರ ಸಂಜೆಯಾದರೂ, ದಮಾಮ್ ನಿಂದ ನಿರ್ಗಮಿಸಿರಲಿಲ್ಲ. ವಿಮಾನ ವಿಳಂಬವಾಗಿದ್ದಕ್ಕೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಪ್ರಯಾಣಿಕರಿಗೆ ಸೂಕ್ತ ಮಾಹಿತಿ ನೀಡಿಲ್ಲ. ಇದರಿಂದ ತೀವ್ರ ತೊಂದರೆ ಅನುಭವಿಸುವಂತಾಯಿತು ಎಂದು ಪ್ರಯಾಣಿಕರು ದೂರಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಮಧ್ಯರಾತ್ರಿ ಸುಮಾರಿಗೆ ವಿಮಾನ ರದ್ದತಿಯ ಬಗ್ಗೆ ಪ್ರಯಾಣಿಕರಿಗೆ ಸೂಚನೆ ನೀಡಿತ್ತು. ಬಳಿಕ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಯಾಣ ಆರಂಭಿಸುವ ಬಗ್ಗೆ ಭರವಸೆ ನೀಡಿತ್ತು. ಅನಿರೀಕ್ಷಿತ ಪ್ರಕಟಣೆಯಿಂದ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರು ತೊಂದರೆ ಎದುರಿಸುವಂತಾಯಿತು ಎಂದು ಪ್ರಯಾಣಿಕರು ಹೇಳಿದ್ದಾರೆ.
ಪ್ರಯಾಣಿಕರೊಬ್ಬರು ಪ್ರತಿಕ್ರಿಯಿಸಿ, ದೂರದ ಸ್ಥಳಗಳಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದವರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆಯನ್ನೂ ಮಾಡಿಲ್ಲ. ವಿಮಾನಯಾನ ಸಂಸ್ಥೆಯಿಂದ ಆಹಾರ ಅಥವಾ ವಸತಿ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಇದರಿಂದ ತುರ್ತು ಪ್ರಯಾಣಕ್ಕೆ ಬಂದವರು ಕಷ್ಟ ಎದುರಿಸುವಂತಾಗಿದೆ ಎಂದರು.
ಗುರುವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಿಗೆ, ವಿಮಾನವೇರಲು ಅವಕಾಶ ನೀಡಲಾಗಿತ್ತು. ಆದರೆ ಅರ್ಧ ಗಂಟೆಯ ನಂತರ, ಪ್ರಯಾಣಿಕರನ್ನು ಕೆಳಗಿಳಿಸಿದ್ದು ವಿಮಾನದ ಹಾರಾಟ ಮತ್ತಷ್ಟು ವಿಳಂಬವಾಗುವ ಬಗ್ಗೆ ಸೂಚನೆ ನೀಡಿದರು. ಸೌದಿ ಅರೇಬಿಯಾದ ಸ್ಥಳೀಯ ಸಮಯ ಮಧ್ಯಾಹ್ನ 3 ಗಂಟೆಯಾದರೂ, ಅಧಿಕಾರಿಗಳು ಮಂಗಳೂರಿಗೆ ಹೊರಡುವ ಏರ್ ಇಂಡಿಯಾ ವಿಮಾನ ಹಾರಾಟದ ಬಗ್ಗೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಮತ್ತು ರೋಗಿಗಳು ವಿಮಾನ ವಿಳಂಬವಾದ್ದರಿಂದ ಸರಿಯಾದ ವ್ಯವಸ್ಥೆಗಳಿಲ್ಲದೇ ಏರ್ ಇಂಡಿಯಾ ಸಿಬಂದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಎಂದು ವಾರ್ತಾ ಭಾರತಿ ವರದಿ ಮಾಡಿದೆ.
Saudi to Mangalore flight delayed for 18 hours, frustrated passengers fight with airlines for their behaviour. Passengers also had no food and water provided by the airlines even after waiting for hours.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm