ಬ್ರೇಕಿಂಗ್ ನ್ಯೂಸ್
07-03-24 09:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಸೌದಿ ಅರೇಬಿಯಾದ ದಮಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು 18 ಗಂಟೆ ಕಳೆದರೂ ಪ್ರಯಾಣ ಆರಂಭಿಸದ ಬಗ್ಗೆ ಪ್ರಯಾಣಿಕರು ತೊಂದರೆ ಅನುಭವಿಸಿದ್ದು ವಿಮಾನ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾತ್ರಿ 10:20 ಕ್ಕೆ ಟೇಕಾಫ್ ಆಗಬೇಕಿದ್ದ ವಿಮಾನವು ಗುರುವಾರ ಸಂಜೆಯಾದರೂ, ದಮಾಮ್ ನಿಂದ ನಿರ್ಗಮಿಸಿರಲಿಲ್ಲ. ವಿಮಾನ ವಿಳಂಬವಾಗಿದ್ದಕ್ಕೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಪ್ರಯಾಣಿಕರಿಗೆ ಸೂಕ್ತ ಮಾಹಿತಿ ನೀಡಿಲ್ಲ. ಇದರಿಂದ ತೀವ್ರ ತೊಂದರೆ ಅನುಭವಿಸುವಂತಾಯಿತು ಎಂದು ಪ್ರಯಾಣಿಕರು ದೂರಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಮಧ್ಯರಾತ್ರಿ ಸುಮಾರಿಗೆ ವಿಮಾನ ರದ್ದತಿಯ ಬಗ್ಗೆ ಪ್ರಯಾಣಿಕರಿಗೆ ಸೂಚನೆ ನೀಡಿತ್ತು. ಬಳಿಕ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಯಾಣ ಆರಂಭಿಸುವ ಬಗ್ಗೆ ಭರವಸೆ ನೀಡಿತ್ತು. ಅನಿರೀಕ್ಷಿತ ಪ್ರಕಟಣೆಯಿಂದ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರು ತೊಂದರೆ ಎದುರಿಸುವಂತಾಯಿತು ಎಂದು ಪ್ರಯಾಣಿಕರು ಹೇಳಿದ್ದಾರೆ.
ಪ್ರಯಾಣಿಕರೊಬ್ಬರು ಪ್ರತಿಕ್ರಿಯಿಸಿ, ದೂರದ ಸ್ಥಳಗಳಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದವರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆಯನ್ನೂ ಮಾಡಿಲ್ಲ. ವಿಮಾನಯಾನ ಸಂಸ್ಥೆಯಿಂದ ಆಹಾರ ಅಥವಾ ವಸತಿ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಇದರಿಂದ ತುರ್ತು ಪ್ರಯಾಣಕ್ಕೆ ಬಂದವರು ಕಷ್ಟ ಎದುರಿಸುವಂತಾಗಿದೆ ಎಂದರು.
ಗುರುವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಿಗೆ, ವಿಮಾನವೇರಲು ಅವಕಾಶ ನೀಡಲಾಗಿತ್ತು. ಆದರೆ ಅರ್ಧ ಗಂಟೆಯ ನಂತರ, ಪ್ರಯಾಣಿಕರನ್ನು ಕೆಳಗಿಳಿಸಿದ್ದು ವಿಮಾನದ ಹಾರಾಟ ಮತ್ತಷ್ಟು ವಿಳಂಬವಾಗುವ ಬಗ್ಗೆ ಸೂಚನೆ ನೀಡಿದರು. ಸೌದಿ ಅರೇಬಿಯಾದ ಸ್ಥಳೀಯ ಸಮಯ ಮಧ್ಯಾಹ್ನ 3 ಗಂಟೆಯಾದರೂ, ಅಧಿಕಾರಿಗಳು ಮಂಗಳೂರಿಗೆ ಹೊರಡುವ ಏರ್ ಇಂಡಿಯಾ ವಿಮಾನ ಹಾರಾಟದ ಬಗ್ಗೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಮತ್ತು ರೋಗಿಗಳು ವಿಮಾನ ವಿಳಂಬವಾದ್ದರಿಂದ ಸರಿಯಾದ ವ್ಯವಸ್ಥೆಗಳಿಲ್ಲದೇ ಏರ್ ಇಂಡಿಯಾ ಸಿಬಂದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಎಂದು ವಾರ್ತಾ ಭಾರತಿ ವರದಿ ಮಾಡಿದೆ.
Saudi to Mangalore flight delayed for 18 hours, frustrated passengers fight with airlines for their behaviour. Passengers also had no food and water provided by the airlines even after waiting for hours.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm