ಬ್ರೇಕಿಂಗ್ ನ್ಯೂಸ್
07-03-24 09:46 pm Mangalore Correspondent ಕರಾವಳಿ
ಮಂಗಳೂರು, ಮಾ.7: ಸೌದಿ ಅರೇಬಿಯಾದ ದಮಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು 18 ಗಂಟೆ ಕಳೆದರೂ ಪ್ರಯಾಣ ಆರಂಭಿಸದ ಬಗ್ಗೆ ಪ್ರಯಾಣಿಕರು ತೊಂದರೆ ಅನುಭವಿಸಿದ್ದು ವಿಮಾನ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾತ್ರಿ 10:20 ಕ್ಕೆ ಟೇಕಾಫ್ ಆಗಬೇಕಿದ್ದ ವಿಮಾನವು ಗುರುವಾರ ಸಂಜೆಯಾದರೂ, ದಮಾಮ್ ನಿಂದ ನಿರ್ಗಮಿಸಿರಲಿಲ್ಲ. ವಿಮಾನ ವಿಳಂಬವಾಗಿದ್ದಕ್ಕೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಿಂದ ಪ್ರಯಾಣಿಕರಿಗೆ ಸೂಕ್ತ ಮಾಹಿತಿ ನೀಡಿಲ್ಲ. ಇದರಿಂದ ತೀವ್ರ ತೊಂದರೆ ಅನುಭವಿಸುವಂತಾಯಿತು ಎಂದು ಪ್ರಯಾಣಿಕರು ದೂರಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಮಧ್ಯರಾತ್ರಿ ಸುಮಾರಿಗೆ ವಿಮಾನ ರದ್ದತಿಯ ಬಗ್ಗೆ ಪ್ರಯಾಣಿಕರಿಗೆ ಸೂಚನೆ ನೀಡಿತ್ತು. ಬಳಿಕ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಯಾಣ ಆರಂಭಿಸುವ ಬಗ್ಗೆ ಭರವಸೆ ನೀಡಿತ್ತು. ಅನಿರೀಕ್ಷಿತ ಪ್ರಕಟಣೆಯಿಂದ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಪ್ರಯಾಣಿಕರು ತೊಂದರೆ ಎದುರಿಸುವಂತಾಯಿತು ಎಂದು ಪ್ರಯಾಣಿಕರು ಹೇಳಿದ್ದಾರೆ.
ಪ್ರಯಾಣಿಕರೊಬ್ಬರು ಪ್ರತಿಕ್ರಿಯಿಸಿ, ದೂರದ ಸ್ಥಳಗಳಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದವರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆಯನ್ನೂ ಮಾಡಿಲ್ಲ. ವಿಮಾನಯಾನ ಸಂಸ್ಥೆಯಿಂದ ಆಹಾರ ಅಥವಾ ವಸತಿ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಇದರಿಂದ ತುರ್ತು ಪ್ರಯಾಣಕ್ಕೆ ಬಂದವರು ಕಷ್ಟ ಎದುರಿಸುವಂತಾಗಿದೆ ಎಂದರು.
ಗುರುವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಿಗೆ, ವಿಮಾನವೇರಲು ಅವಕಾಶ ನೀಡಲಾಗಿತ್ತು. ಆದರೆ ಅರ್ಧ ಗಂಟೆಯ ನಂತರ, ಪ್ರಯಾಣಿಕರನ್ನು ಕೆಳಗಿಳಿಸಿದ್ದು ವಿಮಾನದ ಹಾರಾಟ ಮತ್ತಷ್ಟು ವಿಳಂಬವಾಗುವ ಬಗ್ಗೆ ಸೂಚನೆ ನೀಡಿದರು. ಸೌದಿ ಅರೇಬಿಯಾದ ಸ್ಥಳೀಯ ಸಮಯ ಮಧ್ಯಾಹ್ನ 3 ಗಂಟೆಯಾದರೂ, ಅಧಿಕಾರಿಗಳು ಮಂಗಳೂರಿಗೆ ಹೊರಡುವ ಏರ್ ಇಂಡಿಯಾ ವಿಮಾನ ಹಾರಾಟದ ಬಗ್ಗೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಮತ್ತು ರೋಗಿಗಳು ವಿಮಾನ ವಿಳಂಬವಾದ್ದರಿಂದ ಸರಿಯಾದ ವ್ಯವಸ್ಥೆಗಳಿಲ್ಲದೇ ಏರ್ ಇಂಡಿಯಾ ಸಿಬಂದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಎಂದು ವಾರ್ತಾ ಭಾರತಿ ವರದಿ ಮಾಡಿದೆ.
Saudi to Mangalore flight delayed for 18 hours, frustrated passengers fight with airlines for their behaviour. Passengers also had no food and water provided by the airlines even after waiting for hours.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 09:42 pm
Mangalore Correspondent
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm