ಬ್ರೇಕಿಂಗ್ ನ್ಯೂಸ್
27-11-20 11:59 am Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 27: ಜಾಗದ ಪಹಣಿ ಪತ್ರದಲ್ಲಿ ಸರ್ವೆ ನಂಬ್ರ ಬದಲಾಗಿದ್ದನ್ನು ಸರಿಪಡಿಸಲು ಒಂದು ಸಾವಿರ ಲಂಚ ಕೇಳಿದ ಬಂಟ್ವಾಳದ ಉಪ ತಹಸೀಲ್ದಾರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಉಪ ತಹಸೀಲ್ದಾರ್ ಆಗಿರುವ ರವಿಚಂದ್ರ ಲಂಚ ಪಡೆಯುತ್ತಿರುವಾಗಲೇ ಸಿಕ್ಕಿಬಿದ್ದವರು. ಪಜೀರು ನಿವಾಸಿ ವೆರೋನಿಕಾ ರೋಡ್ರಿಗಸ್ ಎಂವಬರು, ಬೆಂಜನಪದವಿನ ತಮ್ಮ ಜಾಗದ ದಾಖಲೆ ಪತ್ರದಲ್ಲಿ ಸರ್ವೆ ನಂಬ್ರ ಬದಲಾಗಿದ್ದನ್ನು ಸರಿಪಡಿಸಲು ಅರ್ಜಿ ಸಲ್ಲಿಸಿದ್ದರು.
ಸರ್ವೆ ನಂಬರ್ 107-14 ಆಗಬೇಕಾಗಿದ್ದಲ್ಲಿ 107-1ಎಚ್ ಎಂದು ನಮೂದಾಗಿತ್ತು. ಸಣ್ಣ ಬದಲಾವಣೆಯನ್ನು ಸರಿಪಡಿಸಲು 2018ರ ಜೂನ್ 12ರಂದು ತಹಸೀಲ್ದಾರ್ ಕಚೇರಿಗೆ ಅರ್ಜಿ ಬರೆದಿದ್ದರು. ಆದರೆ, ವರ್ಷ ಕಳೆದರೂ ಅರ್ಜಿ ಅಲ್ಲಿಂದ ಕದಲಿರಲಿಲ್ಲ. ಮತ್ತೆ ಮತ್ತೆ ತಹಸೀಲ್ದಾರ್ ಅವರನ್ನು ಭೇಟಿಯಾಗಿ ಗೋಗರೆದಾಗ, 2019 ಮೇ ತಿಂಗಳಲ್ಲಿ ಅರ್ಜಿ ಮೇರಮಜಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬಂದಿತ್ತು. ಆನಂತರವೂ ತಮ್ಮ ಕೆಲಸ ಆಗಲೇ ಇಲ್ಲ.
ಮತ್ತೊಂದು ವರ್ಷ ಕಳೆದ ಬಳಿಕ, 2020ರಲ್ಲಿ ಅರ್ಜಿ ಗ್ರಾಮಾಧಿಕಾರಿಯಿಂದ ಮತ್ತೆ ತಹಸೀಲ್ದಾರ್ ಕಚೇರಿಗೆ ಅಪ್ರೂವಲ್ ಗೆ ಬಂದಿತ್ತು. ಗ್ರಾಮಾಧಿಕಾರಿ ಕೊಟ್ಟ ಉಲ್ಲೇಖ ಪತ್ರಕ್ಕೆ ತಹಸೀಲ್ದಾರ್ ಸಹಿ ಹಾಕಿ ಅರ್ಜಿಯನ್ನು ಮುಂದಕ್ಕೆ ಕೊಡಬೇಕಿತ್ತು. ಅರ್ಜಿದಾರರು ಮತ್ತೆ ಮತ್ತೆ ಉಪ ತಹಸೀಲ್ದಾರ್ ಅವರನ್ನು ಭೇಟಿಯಾಗಿದ್ದು, ಕೊನೆಗೆ ಸಹಿ ಹಾಕಿ ಕೊಡಲು ಹಣದ ಬೇಡಿಕೆ ಇಟ್ಟಿದ್ದಾರೆ.
ಅರ್ಜಿದಾರ ವೆರೋನಿಕಾ ರೋಡ್ರಿಗಸ್, ಈ ವಿಚಾರವನ್ನು ಮಂಗಳೂರಿನ ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಅಧಿಕಾರಿಗಳು ಮೊದಲೇ ಕೊಟ್ಟಿದ್ದ ಒಂದು ಸಾವಿರ ರೂ. ಹಣವನ್ನು ಅರ್ಜಿದಾರರಿಂದ ಪಡೆಯುತ್ತಿದ್ದಾಗಲೇ ಉಪ ತಹಸೀಲ್ದಾರ್ ಈಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ಕೆ.ಸಿ ಪ್ರಕಾಶ್ ನೇತೃತ್ವದಲ್ಲಿ ಇನ್ ಸ್ಪೆಕ್ಟರ್ ಗಳಾದ ಗುರುರಾಜ್ ಮತ್ತು ಶ್ಯಾಮಸುಂದರ್ ದಾಳಿ ಕಾರ್ಯಾಚರೆ ನಡೆಸಿದ್ದರು. ಒಂದು ಸಣ್ಣ ಫೈಲ್ ಮುಂದಿಟ್ಟು ಕಂದಾಯ ಇಲಾಖೆ ಅಧಿಕಾರಿಗಳು ಹೇಗೆಲ್ಲಾ ಪೀಡಿಸುತ್ತಾರೆ, ಹಣ ಕೊಡದಿದ್ದರೆ ವರ್ಷಗಟ್ಟಲೆ ಹೇಗೆ ಸತಾಯಿಸುತ್ತಾರೆ ಎಂಬುದಕ್ಕೆ ಈ ಪ್ರಕರಣ ನಿದರ್ಶನ.
The Anti-Corruption Bureau (ACB) officials caught deputy tahsildar in Bantwal taluk office, Ravishankar, when accepting a bribe.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm