ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm