ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm