ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.
ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm