ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm