ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 09:31 pm
HK News Desk
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm