ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm