ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am