ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm