ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm