ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 04:31 pm
Mangalore Correspondent
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm