ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm