ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am