ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm