ಬ್ರೇಕಿಂಗ್ ನ್ಯೂಸ್
12-03-24 12:46 pm Mangalore Correspondent ಕರಾವಳಿ
ಮಂಗಳೂರು, ಮಾ.12: ಯಾರೇ ಅಭ್ಯರ್ಥಿ ಆದರೂ ಮೋದಿ ಮತ್ತೆ ಪ್ರಧಾನಿಯಾಗಬೇಕು, ಬಿಜೆಪಿ ಮತ್ತೆ ಗೆಲ್ಲಬೇಕು ಎಂಬುದು ನಮ್ಮೆಲ್ಲರ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗೆ ನಾವು ಬದ್ದರಾಗಿ ಕೆಲಸ ಮಾಡ್ತೇವೆ. ಪಾರ್ಟಿ ಏನು ಹೇಳುತ್ತೋ ಅದನ್ನ ನಾವು ಮಾಡ್ತೇವೆ. ಗುಡಿಸಿ ಅಂದ್ರೆ ಗುಡಿಸ್ತೇವೆ, ಒರೆಸಿ ಅಂದ್ರೆ ಒರೆಸ್ತೇವೆ.. ಹೀಗೆಂದು ಸಂಸದ ನಳಿನ್ ಕುಮಾರ್ ಭಾವುಕ ಮಾತುಗಳನ್ನಾಡಿದ್ದಾರೆ.
ಈ ಬಾರಿ ಪ್ರತಾಪಸಿಂಹ ಸೇರಿದಂತೆ ಕೆಲವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ, ಸಂಸದ ನಳಿನ್ ಕುಮಾರ್ ಕಟೀಲ್ ಭಾವುಕ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತರನ್ನ ಗುರುತಿಸೋದು ನಮ್ಮ ಪಾರ್ಟಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಯೋಚನೆ ಮಾಡಿಕೊಂಡು ಸಂಸದ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಮಾಡ್ತಾರೆ. ಪಕ್ಷ ನಿಂತ ನೀರಾಗಬಾರದು, ಹೊಸಬರು ಬರ್ತಾ ಇರಬೇಕು, ಸ್ವಾಗತಿಸ್ತೇನೆ ಎಂದು ಪರೋಕ್ಷವಾಗಿ ತನಗೂ ಟಿಕೆಟ್ ಸಿಗುತ್ತಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಪಕ್ಷದ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಅಧಿಕಾರ ಮುಖ್ಯ ಅಲ್ಲ, ರಾಷ್ಟ್ರೀಯ ನಾಯಕರ ಚಿಂತನೆ ಮುಖ್ಯ. ನಾನು ಸಾಮಾಜಿಕ ತಾಣಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಪಕ್ಷದ ನಿರ್ಧಾರಕ್ಕೆ ಬದ್ಧನಿದ್ದೇನೆ. ನಾವು ಅದನ್ನೇ ನಂಬಿ ಇದ್ದವರಲ್ಲ, ಸಂಘಟನೆ ಕಾರ್ಯವನ್ನು ನಂಬಿದವರು. ಕಾರ್ಯಕರ್ತರ ಆಧಾರದಲ್ಲಿ ಇದೆಲ್ಲಾ ಕಾರ್ಯಗಳು ಆಗುತ್ತೆ. ರಾಷ್ಟ್ರೀಯ ನಾಯಕರ ಯಾವ ತೀರ್ಮಾನಕ್ಕೂ ನಾವು ಬದ್ಧರಿದ್ದೇವೆ ಎಂದರು.
ನನಗೆ ಮೂರು ಬಾರಿ ಅವಕಾಶ ಕೊಡಲಾಗಿದೆ, 15 ವರ್ಷ ಕೆಲಸ ಮಾಡಿದ್ದೇನೆ. ಎಲ್ಲಿಯೂ ವ್ಯತ್ಯಾಸಗಳಿಲ್ಲ, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯಲ್ಲೂ ತುಳಿಯೋ ಕೆಲಸ ನಡೆಯಲ್ಲ, ಬೆಳೆಸೋ ಕೆಲಸ ಮಾಡ್ತಾರೆ ಎಂದು ಹೇಳಿದ ನಳಿನ್ ಕುಮಾರ್, ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೆ, ಸಂಘದ ವಿಚಾರ ಇಟ್ಟುಕೊಂಡಿದ್ದೆ. ಹಿರಿಯರು ಬಿಜೆಪಿ ಕೆಲಸ ಮಾಡು ಅಂತ ಹೇಳಿದ್ರು, ಲೋಕಸಭೆಗೆ ಅವಕಾಶ ಕೊಟ್ಟರು. ಸಾಮಾನ್ಯ ಕಾರ್ಯಕರ್ತನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೂಡ ಕೊಟ್ಟರು ಎಂದರು.
ಅವಕಾಶ ಸಿಕ್ಕಾಗ ನ್ಯಾಯ ಸಿಕ್ಕಿದೆ, ಸಿಗದೇ ಇದ್ದಾಗ ಅನ್ಯಾಯ ಆಗಿದೆ ಎನ್ನುವ ಹಕ್ಕು ನನಗಿಲ್ಲ. ಪಕ್ಷ ಎಲ್ಲರನ್ನೂ ಬೆಳೆಸಿದೆ, ಪಕ್ಷದ ಕೆಲಸಕ್ಕೆ ಜನ ಬೇಕಿದೆ. ಎಲ್ಲರಿಗೂ ಅಧಿಕಾರದ ಸ್ಥಾನ ಸಿಗಲ್ಲ. ಪಕ್ಷ ಹೇಳಿದರೆ ಯಾವ ಕೆಲಸ ಮಾಡೋದಕ್ಕೂ ರೆಡಿ ಇದ್ದೇನೆ ಎಂದರು. ಅಸಮಾಧಾನ ಇದೆಯಾ ಎಂಬ ಪ್ರಶ್ನೆಗೆ, ಅಸಮಾಧಾನ ಯಾಕೆ ಆಗಬೇಕು? ನಾವು ಮಾಡೋದು ಸಂಘಟನೆ ಕಾರ್ಯ. ನಮಗೆ ಅಸಮಾಧಾನ ಯಾವುದೇ ಸಂದರ್ಭದಲ್ಲಿ ಇರಲ್ಲ, ಅದು ಅಸಾಧ್ಯ ಎಂದು ಹೇಳಿದರು.
Mangalore MP Nalin Kateel says ready for anything, will respect BJP High command decision, he was quite emotional as he was speaking to media persons here in Mangalore.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm