ಬ್ರೇಕಿಂಗ್ ನ್ಯೂಸ್
27-11-20 03:17 pm Mangalore Correspondent ಕರಾವಳಿ
ಮಂಗಳೂರು, ನ.27: ಕೊರೊನಾ ಲಸಿಕೆ ಇನ್ನೇನು ಕೆಲವೇ ದಿನಗಳಲ್ಲಿ ಬರುತ್ತಿದೆ. ಆದರೆ, ಇಡೀ ರಾಜ್ಯದಲ್ಲಿ ಕೊರೊನಾ ಲಸಿಕೆಯನ್ನು ಜನರಿಗೆ ಉಚಿತವಾಗಿ ಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಆಗ್ರಹಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಐವಾನ್ ಡಿಸೋಜ, ಕೊರೊನಾ ಲಸಿಕೆಯನ್ನು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಫ್ರಂಟ್ ಲೈನರ್ಸ್ ಗೆ ಉಚಿವಾಗಿ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅದು ಸ್ವಾಗತಾರ್ಹ ವಿಚಾರ, ಅದೇ ರೀತಿ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಬೇಕು. ಹಾಗೆಂದು ವ್ಯಾಕ್ಸಿನ್ ನೀಡುವ ಸಂದರ್ಭದಲ್ಲಿ ಎಪಿಎಲ್, ಬಿಪಿಎಲ್ ಎಂದು ಲೆಕ್ಕ ಹಾಕುವುದೂ ಅಗತ್ಯವಿಲ್ಲ. ಲಸಿಕೆಯ ಹೆಸರಲ್ಲಿ ವ್ಯಾಪಾರ ಆಗುವುದೂ ನಡೆಯಬಾರದು. ಈ ಬಗ್ಗೆ ಮುಖ್ಯಮಂತ್ರಿ ರಾಜ್ಯದ ಜನರಿಗೆ ಸ್ಪಷ್ಟ ಮಾತುಗಳಲ್ಲಿ ತಿಳಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ಕೊರೊನಾ ಟೆಸ್ಟ್ ಉಚಿತವಾಗಿ ಮಾಡಬೇಕೆಂದು ಆಗ್ರಹಿಸಿದ ಐವಾನ್ ಡಿಸೋಜ, ಆರಂಭದಲ್ಲಿ 4500 ರೂಪಾಯಿ ಶುಲ್ಕ ಮಾಡುತ್ತಿದ್ದರು. ರಾಜ್ಯ ಸರಕಾರ ಈ ಮೊತ್ತವನ್ನು ಈಗ 1600 ಕ್ಕೆ ಇಳಿಸಿದೆ. ಮಂಗಳೂರಿನಲ್ಲಿ ಎಂಟು ಮೆಡಿಕಲ್ ಕಾಲೇಜುಗಳಲ್ಲಿ ಟೆಸ್ಟ್ ಲ್ಯಾಬ್ ಮಾಡಲು ಅವಕಾಶ ನೀಡಿದ್ದಾರೆ. ಮೆಡಿಕಲ್ ಕಾಲೇಜುಗಳು ಕೊರೊನಾ ಹೆಸರಲ್ಲಿ ಹಣ ಮಾಡುತ್ತಿದೆ. ರಾಜ್ಯ ಸರಕಾರ ಜನರಿಗೆ ಸಂಪೂರ್ಣ ಉಚಿತವಾಗಿ ಟೆಸ್ಟ್ ಮಾಡಿಸಬೇಕು. ಈಗಿನ ಸನ್ನಿವೇಶದಲ್ಲಿ ಸರಕಾರದಿಂದ ಉಚಿತವಾಗಿ ಮಾಡುವುದು ಕಷ್ಟದ ಕೆಲಸವಲ್ಲ ಎಂದು ಹೇಳಿದರು.
ಸುದ್ದಿಗೋಷ್ಟಿಗೂ ಮುನ್ನ ಕೊರೊನಾ ಸಂದರ್ಭದಲ್ಲಿ ನಷ್ಟ ಅನುಭವಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ತುಳ್ಳು ಗಾಡಿಗಳನ್ನು ಉಚಿತವಾಗಿ ನೀಡಲಾಯಿತು. ತಳ್ಳುಗಾಡಿಯನ್ನು ಉದ್ಯಮಿ ವಿವೇಕ್ ರಾಜ್ ಕೊಡುಗೆಯಾಗಿ ನೀಡಿದ್ದಾರೆ. ಕಾಂಗ್ರೆಸ್ ಭವನದ ಮುಂದೆ ಕಾರ್ಯಕ್ರಮ ನಡೆಯಿತು.
Video:
Former MLC and Karnataka Pradesh Congress Committee (KPCC) spokesperson Ivan D'Souza on Friday November 27, said that the BJP-led state government should provide Rs 5 lac compensation from the chief minister's relief fund to BPL families of those who died due to Covid-19 pandemic.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm