ಬ್ರೇಕಿಂಗ್ ನ್ಯೂಸ್
27-11-20 03:17 pm Mangalore Correspondent ಕರಾವಳಿ
ಮಂಗಳೂರು, ನ.27: ಕೊರೊನಾ ಲಸಿಕೆ ಇನ್ನೇನು ಕೆಲವೇ ದಿನಗಳಲ್ಲಿ ಬರುತ್ತಿದೆ. ಆದರೆ, ಇಡೀ ರಾಜ್ಯದಲ್ಲಿ ಕೊರೊನಾ ಲಸಿಕೆಯನ್ನು ಜನರಿಗೆ ಉಚಿತವಾಗಿ ಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಆಗ್ರಹಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಐವಾನ್ ಡಿಸೋಜ, ಕೊರೊನಾ ಲಸಿಕೆಯನ್ನು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಫ್ರಂಟ್ ಲೈನರ್ಸ್ ಗೆ ಉಚಿವಾಗಿ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅದು ಸ್ವಾಗತಾರ್ಹ ವಿಚಾರ, ಅದೇ ರೀತಿ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಬೇಕು. ಹಾಗೆಂದು ವ್ಯಾಕ್ಸಿನ್ ನೀಡುವ ಸಂದರ್ಭದಲ್ಲಿ ಎಪಿಎಲ್, ಬಿಪಿಎಲ್ ಎಂದು ಲೆಕ್ಕ ಹಾಕುವುದೂ ಅಗತ್ಯವಿಲ್ಲ. ಲಸಿಕೆಯ ಹೆಸರಲ್ಲಿ ವ್ಯಾಪಾರ ಆಗುವುದೂ ನಡೆಯಬಾರದು. ಈ ಬಗ್ಗೆ ಮುಖ್ಯಮಂತ್ರಿ ರಾಜ್ಯದ ಜನರಿಗೆ ಸ್ಪಷ್ಟ ಮಾತುಗಳಲ್ಲಿ ತಿಳಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ಕೊರೊನಾ ಟೆಸ್ಟ್ ಉಚಿತವಾಗಿ ಮಾಡಬೇಕೆಂದು ಆಗ್ರಹಿಸಿದ ಐವಾನ್ ಡಿಸೋಜ, ಆರಂಭದಲ್ಲಿ 4500 ರೂಪಾಯಿ ಶುಲ್ಕ ಮಾಡುತ್ತಿದ್ದರು. ರಾಜ್ಯ ಸರಕಾರ ಈ ಮೊತ್ತವನ್ನು ಈಗ 1600 ಕ್ಕೆ ಇಳಿಸಿದೆ. ಮಂಗಳೂರಿನಲ್ಲಿ ಎಂಟು ಮೆಡಿಕಲ್ ಕಾಲೇಜುಗಳಲ್ಲಿ ಟೆಸ್ಟ್ ಲ್ಯಾಬ್ ಮಾಡಲು ಅವಕಾಶ ನೀಡಿದ್ದಾರೆ. ಮೆಡಿಕಲ್ ಕಾಲೇಜುಗಳು ಕೊರೊನಾ ಹೆಸರಲ್ಲಿ ಹಣ ಮಾಡುತ್ತಿದೆ. ರಾಜ್ಯ ಸರಕಾರ ಜನರಿಗೆ ಸಂಪೂರ್ಣ ಉಚಿತವಾಗಿ ಟೆಸ್ಟ್ ಮಾಡಿಸಬೇಕು. ಈಗಿನ ಸನ್ನಿವೇಶದಲ್ಲಿ ಸರಕಾರದಿಂದ ಉಚಿತವಾಗಿ ಮಾಡುವುದು ಕಷ್ಟದ ಕೆಲಸವಲ್ಲ ಎಂದು ಹೇಳಿದರು.
ಸುದ್ದಿಗೋಷ್ಟಿಗೂ ಮುನ್ನ ಕೊರೊನಾ ಸಂದರ್ಭದಲ್ಲಿ ನಷ್ಟ ಅನುಭವಿಸಿದ ಬೀದಿ ಬದಿ ವ್ಯಾಪಾರಿಗಳಿಗೆ ತುಳ್ಳು ಗಾಡಿಗಳನ್ನು ಉಚಿತವಾಗಿ ನೀಡಲಾಯಿತು. ತಳ್ಳುಗಾಡಿಯನ್ನು ಉದ್ಯಮಿ ವಿವೇಕ್ ರಾಜ್ ಕೊಡುಗೆಯಾಗಿ ನೀಡಿದ್ದಾರೆ. ಕಾಂಗ್ರೆಸ್ ಭವನದ ಮುಂದೆ ಕಾರ್ಯಕ್ರಮ ನಡೆಯಿತು.
Video:
Former MLC and Karnataka Pradesh Congress Committee (KPCC) spokesperson Ivan D'Souza on Friday November 27, said that the BJP-led state government should provide Rs 5 lac compensation from the chief minister's relief fund to BPL families of those who died due to Covid-19 pandemic.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm