ಬ್ರೇಕಿಂಗ್ ನ್ಯೂಸ್
12-03-24 04:59 pm Mangalore Correspondent ಕರಾವಳಿ
ಮಂಗಳೂರು, ಮಾ.12: ಟ್ರಸ್ಟ್ ಅಧೀನದ ಜಾಗಕ್ಕೆ ಬೇಲಿ ಹಾಕುವ ಸಂದರ್ಭ ಟ್ರಸ್ಟ್ ನ ಮಹಿಳಾ ಕಾರ್ಯದರ್ಶಿಗೆ ತಡೆಯೊಡ್ಡಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡದ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ, ಸರ್ವೆ ನಂ. 149 ರಲ್ಲಿ ಎರಡು ಎಕರೆ ಜಮೀನು ಮಂಜೂರಾಗಿರುತ್ತದೆ. ಜ.26 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟ್ರಸ್ಟ್ ಕಾರ್ಯದರ್ಶಿ ಲತಾ ರೈ ಅವರು ಸದಸ್ಯರಾದ ಡಾ.ಸಿ.ಎನ್.ಶಂಕರ್ ರಾವ್, ಪ್ರೊ.ಕೆ.ಎಂ.ಬಾಲಕೃಷ್ಣ, ಜಗದೀಶ್ ಕಾಪುಮಲೆ ಎಂಬವರೊಂದಿಗೆ ಟ್ರಸ್ಟ್ ನ ಜಾಗದ ಗಡಿಯಲ್ಲಿ, ಬೇಲಿ ಹಾಕಲು ಸೈಟ್ ಗೆ ತೆರಳಿದ್ದಾಗ ಸುಮಾರು 11 ಗಂಟೆಗೆ ಅಂದು ಕೊಣಾಜೆ ಠಾಣೆಯ ಜವಾಬ್ದಾರಿ ಹೊಂದಿದ್ದ ಉಳ್ಳಾಲದ ಪೊಲೀಸ್ ಠಾಣೆ ಇನ್ಸ್ಕ್ಟರ್ ಬಾಲಕೃಷ್ಣ ಎಚ್.ಎನ್ ಅವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಬಾಲಕೃಷ್ಣ ಅವರು ಸೈಟ್ನಲ್ಲಿದ್ದವರೆಲ್ಲರನ್ನೂ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.
ಲತಾ ರೈ ಅವರು ಹೈಕೋರ್ಟ್ ಆದೇಶದ ಬಗ್ಗೆ ತಿಳಿಸಿದರೂ ಕೂಡ ಅದನ್ನು ಒಪ್ಪಿಕೊಳ್ಳದೇ ಸೈಟ್ನಲ್ಲಿ ಕೆಲಸಗಳನ್ನು ನಿಲ್ಲಿಸಲು ಇಲಾಖೆಯ ಮೇಲಾಧಿಕಾರಿಗಳ ಆದೇಶವಿದೆ ಎಂದು ಹೇಳಿದ ಪಿಐ ಬಾಲಕೃಷ್ಣ ಅವರು ಲತಾ ಅವರ ಕೈಗೆ ಹೊಡೆದು, ಕೈಯನ್ನು ಎಳೆದು ಕೈಯಲ್ಲಿದ್ದ ಮೊಬೈಲ್ ಫೋನ್ ಅನ್ನು ಕಸಿದು ನೆಲಕ್ಕೆ ಹೊಡೆಯಲು ಯತ್ನಿಸಿದ್ದಾರೆ. ಈ ವೇಳೆ ಲತಾ ಅವರ ರಕ್ಷಣೆಗೆ ಬಂದ ಅಭಿಷೇಕ್ ಭಂಡಾರಿ ಎಂಬವರಿಗೂ ಇನ್ಸ್ ಪೆಕ್ಟರ್ ಥಳಿಸಿದ್ದು, ಘಟನೆಯನ್ನು ರೆಕಾರ್ಡ್ ಮಾಡುತ್ತಿದ್ದ ಅವರ ಫೋನ್ ಕಿತ್ತುಕೊಳ್ಳಲು ಯತ್ನಿಸಿ ತಳ್ಳಿದ್ದಾರೆಂದು ದೂರಲಾಗಿದೆ. ಏರು ಧ್ವನಿಯಲ್ಲಿ ಕಿರುಚಾಡಿದ ಬಾಲಕೃಷ್ಣ ಅವರು ಸ್ಥಳದಲ್ಲಿದ್ದವರೆಲ್ಲರನ್ನೂ ಬಂಧಿಸುವುದಾಗಿ ಬೆದರಿಸಿದ್ದಲ್ಲದೆ, ಪೊಲೀಸ್ ವ್ಯಾನ್ನಲ್ಲಿ ಹಾಕುವಂತೆ ಪೊಲೀಸ್ ಸಿಬ್ಬಂದಿಯವರಿಗೆ ಸೂಚಿಸಿದ್ದಾರೆಂದು ಲತಾ ರೈ ಅವರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಲತಾ ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಬಾಲಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.
A case has been filed at Konaje police station against Ullal police station officer H N Balakrishna. The accusation includes obstructing, assault, and threatening the life of a woman secretary of Nirmala Bharat Charitable Trust.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm