ಬ್ರೇಕಿಂಗ್ ನ್ಯೂಸ್
12-03-24 04:59 pm Mangalore Correspondent ಕರಾವಳಿ
ಮಂಗಳೂರು, ಮಾ.12: ಟ್ರಸ್ಟ್ ಅಧೀನದ ಜಾಗಕ್ಕೆ ಬೇಲಿ ಹಾಕುವ ಸಂದರ್ಭ ಟ್ರಸ್ಟ್ ನ ಮಹಿಳಾ ಕಾರ್ಯದರ್ಶಿಗೆ ತಡೆಯೊಡ್ಡಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡದ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ, ಸರ್ವೆ ನಂ. 149 ರಲ್ಲಿ ಎರಡು ಎಕರೆ ಜಮೀನು ಮಂಜೂರಾಗಿರುತ್ತದೆ. ಜ.26 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟ್ರಸ್ಟ್ ಕಾರ್ಯದರ್ಶಿ ಲತಾ ರೈ ಅವರು ಸದಸ್ಯರಾದ ಡಾ.ಸಿ.ಎನ್.ಶಂಕರ್ ರಾವ್, ಪ್ರೊ.ಕೆ.ಎಂ.ಬಾಲಕೃಷ್ಣ, ಜಗದೀಶ್ ಕಾಪುಮಲೆ ಎಂಬವರೊಂದಿಗೆ ಟ್ರಸ್ಟ್ ನ ಜಾಗದ ಗಡಿಯಲ್ಲಿ, ಬೇಲಿ ಹಾಕಲು ಸೈಟ್ ಗೆ ತೆರಳಿದ್ದಾಗ ಸುಮಾರು 11 ಗಂಟೆಗೆ ಅಂದು ಕೊಣಾಜೆ ಠಾಣೆಯ ಜವಾಬ್ದಾರಿ ಹೊಂದಿದ್ದ ಉಳ್ಳಾಲದ ಪೊಲೀಸ್ ಠಾಣೆ ಇನ್ಸ್ಕ್ಟರ್ ಬಾಲಕೃಷ್ಣ ಎಚ್.ಎನ್ ಅವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಬಾಲಕೃಷ್ಣ ಅವರು ಸೈಟ್ನಲ್ಲಿದ್ದವರೆಲ್ಲರನ್ನೂ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.
ಲತಾ ರೈ ಅವರು ಹೈಕೋರ್ಟ್ ಆದೇಶದ ಬಗ್ಗೆ ತಿಳಿಸಿದರೂ ಕೂಡ ಅದನ್ನು ಒಪ್ಪಿಕೊಳ್ಳದೇ ಸೈಟ್ನಲ್ಲಿ ಕೆಲಸಗಳನ್ನು ನಿಲ್ಲಿಸಲು ಇಲಾಖೆಯ ಮೇಲಾಧಿಕಾರಿಗಳ ಆದೇಶವಿದೆ ಎಂದು ಹೇಳಿದ ಪಿಐ ಬಾಲಕೃಷ್ಣ ಅವರು ಲತಾ ಅವರ ಕೈಗೆ ಹೊಡೆದು, ಕೈಯನ್ನು ಎಳೆದು ಕೈಯಲ್ಲಿದ್ದ ಮೊಬೈಲ್ ಫೋನ್ ಅನ್ನು ಕಸಿದು ನೆಲಕ್ಕೆ ಹೊಡೆಯಲು ಯತ್ನಿಸಿದ್ದಾರೆ. ಈ ವೇಳೆ ಲತಾ ಅವರ ರಕ್ಷಣೆಗೆ ಬಂದ ಅಭಿಷೇಕ್ ಭಂಡಾರಿ ಎಂಬವರಿಗೂ ಇನ್ಸ್ ಪೆಕ್ಟರ್ ಥಳಿಸಿದ್ದು, ಘಟನೆಯನ್ನು ರೆಕಾರ್ಡ್ ಮಾಡುತ್ತಿದ್ದ ಅವರ ಫೋನ್ ಕಿತ್ತುಕೊಳ್ಳಲು ಯತ್ನಿಸಿ ತಳ್ಳಿದ್ದಾರೆಂದು ದೂರಲಾಗಿದೆ. ಏರು ಧ್ವನಿಯಲ್ಲಿ ಕಿರುಚಾಡಿದ ಬಾಲಕೃಷ್ಣ ಅವರು ಸ್ಥಳದಲ್ಲಿದ್ದವರೆಲ್ಲರನ್ನೂ ಬಂಧಿಸುವುದಾಗಿ ಬೆದರಿಸಿದ್ದಲ್ಲದೆ, ಪೊಲೀಸ್ ವ್ಯಾನ್ನಲ್ಲಿ ಹಾಕುವಂತೆ ಪೊಲೀಸ್ ಸಿಬ್ಬಂದಿಯವರಿಗೆ ಸೂಚಿಸಿದ್ದಾರೆಂದು ಲತಾ ರೈ ಅವರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಲತಾ ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಬಾಲಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.
A case has been filed at Konaje police station against Ullal police station officer H N Balakrishna. The accusation includes obstructing, assault, and threatening the life of a woman secretary of Nirmala Bharat Charitable Trust.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm