ಬ್ರೇಕಿಂಗ್ ನ್ಯೂಸ್
12-03-24 04:59 pm Mangalore Correspondent ಕರಾವಳಿ
ಮಂಗಳೂರು, ಮಾ.12: ಟ್ರಸ್ಟ್ ಅಧೀನದ ಜಾಗಕ್ಕೆ ಬೇಲಿ ಹಾಕುವ ಸಂದರ್ಭ ಟ್ರಸ್ಟ್ ನ ಮಹಿಳಾ ಕಾರ್ಯದರ್ಶಿಗೆ ತಡೆಯೊಡ್ಡಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡದ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ, ಸರ್ವೆ ನಂ. 149 ರಲ್ಲಿ ಎರಡು ಎಕರೆ ಜಮೀನು ಮಂಜೂರಾಗಿರುತ್ತದೆ. ಜ.26 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟ್ರಸ್ಟ್ ಕಾರ್ಯದರ್ಶಿ ಲತಾ ರೈ ಅವರು ಸದಸ್ಯರಾದ ಡಾ.ಸಿ.ಎನ್.ಶಂಕರ್ ರಾವ್, ಪ್ರೊ.ಕೆ.ಎಂ.ಬಾಲಕೃಷ್ಣ, ಜಗದೀಶ್ ಕಾಪುಮಲೆ ಎಂಬವರೊಂದಿಗೆ ಟ್ರಸ್ಟ್ ನ ಜಾಗದ ಗಡಿಯಲ್ಲಿ, ಬೇಲಿ ಹಾಕಲು ಸೈಟ್ ಗೆ ತೆರಳಿದ್ದಾಗ ಸುಮಾರು 11 ಗಂಟೆಗೆ ಅಂದು ಕೊಣಾಜೆ ಠಾಣೆಯ ಜವಾಬ್ದಾರಿ ಹೊಂದಿದ್ದ ಉಳ್ಳಾಲದ ಪೊಲೀಸ್ ಠಾಣೆ ಇನ್ಸ್ಕ್ಟರ್ ಬಾಲಕೃಷ್ಣ ಎಚ್.ಎನ್ ಅವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಬಾಲಕೃಷ್ಣ ಅವರು ಸೈಟ್ನಲ್ಲಿದ್ದವರೆಲ್ಲರನ್ನೂ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.
ಲತಾ ರೈ ಅವರು ಹೈಕೋರ್ಟ್ ಆದೇಶದ ಬಗ್ಗೆ ತಿಳಿಸಿದರೂ ಕೂಡ ಅದನ್ನು ಒಪ್ಪಿಕೊಳ್ಳದೇ ಸೈಟ್ನಲ್ಲಿ ಕೆಲಸಗಳನ್ನು ನಿಲ್ಲಿಸಲು ಇಲಾಖೆಯ ಮೇಲಾಧಿಕಾರಿಗಳ ಆದೇಶವಿದೆ ಎಂದು ಹೇಳಿದ ಪಿಐ ಬಾಲಕೃಷ್ಣ ಅವರು ಲತಾ ಅವರ ಕೈಗೆ ಹೊಡೆದು, ಕೈಯನ್ನು ಎಳೆದು ಕೈಯಲ್ಲಿದ್ದ ಮೊಬೈಲ್ ಫೋನ್ ಅನ್ನು ಕಸಿದು ನೆಲಕ್ಕೆ ಹೊಡೆಯಲು ಯತ್ನಿಸಿದ್ದಾರೆ. ಈ ವೇಳೆ ಲತಾ ಅವರ ರಕ್ಷಣೆಗೆ ಬಂದ ಅಭಿಷೇಕ್ ಭಂಡಾರಿ ಎಂಬವರಿಗೂ ಇನ್ಸ್ ಪೆಕ್ಟರ್ ಥಳಿಸಿದ್ದು, ಘಟನೆಯನ್ನು ರೆಕಾರ್ಡ್ ಮಾಡುತ್ತಿದ್ದ ಅವರ ಫೋನ್ ಕಿತ್ತುಕೊಳ್ಳಲು ಯತ್ನಿಸಿ ತಳ್ಳಿದ್ದಾರೆಂದು ದೂರಲಾಗಿದೆ. ಏರು ಧ್ವನಿಯಲ್ಲಿ ಕಿರುಚಾಡಿದ ಬಾಲಕೃಷ್ಣ ಅವರು ಸ್ಥಳದಲ್ಲಿದ್ದವರೆಲ್ಲರನ್ನೂ ಬಂಧಿಸುವುದಾಗಿ ಬೆದರಿಸಿದ್ದಲ್ಲದೆ, ಪೊಲೀಸ್ ವ್ಯಾನ್ನಲ್ಲಿ ಹಾಕುವಂತೆ ಪೊಲೀಸ್ ಸಿಬ್ಬಂದಿಯವರಿಗೆ ಸೂಚಿಸಿದ್ದಾರೆಂದು ಲತಾ ರೈ ಅವರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಲತಾ ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಬಾಲಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.
A case has been filed at Konaje police station against Ullal police station officer H N Balakrishna. The accusation includes obstructing, assault, and threatening the life of a woman secretary of Nirmala Bharat Charitable Trust.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm