ಬ್ರೇಕಿಂಗ್ ನ್ಯೂಸ್
12-03-24 06:48 pm Mangalore Correspondent ಕರಾವಳಿ
ಮಂಗಳೂರು, ಮಾ.12: ಬಿಲ್ಲವ ಅಭ್ಯರ್ಥಿಗಳನ್ನು ಪಕ್ಷ ಭೇದ ನೋಡದೆ ಸಮುದಾಯದ ಜನರು ಗೆಲ್ಲಿಸಬೇಕು ಎಂಬ ಹೇಳಿಕೆ ವಿವಾದಕ್ಕೆ ತಿರುಗುತ್ತಲೇ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಸ್ಪಷ್ಟನೆ ನೀಡಿದ್ದಾರೆ.
ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಅಲ್ಲಿ ಕುಳಿತಿದ್ದ ಇಬ್ಬರು ಬಿಲ್ಲವ ಮಹಾಮಂಡಲದ ನಾಯಕರಿಗೆ ನನ್ನ ಪ್ರಶ್ನೆ ಇತ್ತು. ನೀವು ಸಮುದಾಯದ ಅಭ್ಯರ್ಥಿಗಳಿಗೆ ನೈತಿಕ ಬೆಂಬಲ ನೀಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದೆ. ಸುನಿಲ್ ಕುಮಾರ್, ನಾನು, ಸತೀಶ್ ಕುಂಪಲ ಹೆಸರನ್ನು ಉಲ್ಲೇಖಿಸಿ ಪ್ರಶ್ನೆಯನ್ನು ಮಾಡಿದ್ದೆ. ಆ ಸಂದರ್ಭದಲ್ಲಿ ರಕ್ಷಿತ್ ಶಿವರಾಂ ಹೆಸರೂ ಬಂದಿತ್ತು.
ಆದರೆ ಈ ಹೇಳಿಕೆಯನ್ನು ವಿಘ್ನ ಸಂತೋಷಿಗಳು ತಿರುಚಿದ್ದಾರೆ. ನನ್ನ ಪೂರ್ತಿ ಮಾತನ್ನು ಕೇಳಬೇಕು ನೀವು. ನಾನು ಬಿಲ್ಲವ ಸಮುದಾಯಕ್ಕೆ ಕರೆ ಕೊಟ್ಟು ಮಾತಾಡಿಯೇ ಇಲ್ಲ. ನಾನು ಮತ್ತು ಹರೀಶ್ ಪೂಂಜ ಅಣ್ಣ ತಮ್ಮಂದಿರು. ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲ್ಲಿಸಬೇಕಿತ್ತು ಎಂದು ನಾನೆಲ್ಲೂ ಹೇಳಿಲ್ಲ. ನಾವು ಬಿಲ್ಲವರು ಚುನಾವಣೆಗೆ ನಿಂತಾಗ ನೀವು ಬಿಲ್ಲವ ಮಹಾಮಂಡಲ ನೈತಿಕ ಬೆಂಬಲ ಕೊಟ್ಟಿದ್ದೀರಾ ಎಂದು ಅಲ್ಲಿದ್ದವರಿಗೆ ಪ್ರಶ್ನೆ ಮಾಡಿದ್ದೇ ವಿನಾ ಬೇರಾವುದೇ ಮಾತು ಹೇಳಿಲ್ಲ. ನನಗೆ ಚುನಾವಣೆ ಸಂದರ್ಭದಲ್ಲಿ ಹಿಂದು, ಕ್ರಿಸ್ತಿಯನ್, ಮುಸ್ಲಿಂ, ಬಂಟ, ಬಿಲ್ಲವ, ಕುಲಾಲ್ ಎಲ್ಲರೂ ಬೆಂಬಲ ಕೊಟ್ಟಿದ್ದಾರೆ. ಹಣಕಾಸಿನ ಬೆಂಬಲವನ್ನೂ ಕೊಟ್ಟಿದ್ದಾರೆ.
ನಾನೊಬ್ಬ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ. ಬಿಜೆಪಿಯ ನಿಷ್ಠಾವಂತ ಕೆಲಸಗಾರನಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನನ್ನ ಗುರಿ. ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಉಮಾನಾಥ ಕೋಟ್ಯಾನ್ ಮಾಧ್ಯಮದ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ಬಿಲ್ಲವ ಮಹಾಮಂಡಲದ ಕಾರ್ಯಕ್ರಮದಲ್ಲಿ ಉಮಾನಾಥ ಕೋಟ್ಯಾನ್ ಆಡಿದ್ದ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು.
Mangalore My statement has been turned By Vighna Santoshi says Umanatha Kotian. Umanatha Kotian statement to support billavas had sparked controversy in Mangalore.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm