ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm