ಬ್ರೇಕಿಂಗ್ ನ್ಯೂಸ್
12-03-24 09:07 pm Mangalore Correspondent ಕರಾವಳಿ
ಮಂಗಳೂರು, ಮಾ.12: ರಾಜ್ಯದಲ್ಲಿ ಹೆಚ್ಚಿನೆಲ್ಲ ನಿಗಮಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದ್ದರೂ, ಕರಾವಳಿಯಲ್ಲಿ ತುಳುವರನ್ನು ಪ್ರತಿನಿಧಿಸುವ ತುಳು ಸಾಹಿತ್ಯ ಅಕಾಡೆಮಿಗೆ ಇನ್ನೂ ಅಧ್ಯಕ್ಷರ ನೇಮಕ ಮಾಡಿಲ್ಲ. ಇದೀಗ ಗುರುಪುರ ಬ್ಲಾಕ್ ಕಾಂಗ್ರೆಸಿನಲ್ಲಿ ಪ್ರಮುಖರಾಗಿದ್ದುಕೊಂಡು ಜಲ್ಲಿ ಕ್ರಶರ್ ಉದ್ಯಮ ನಡೆಸುತ್ತಿರುವ ವ್ಯಕ್ತಿಯೊಬ್ಬರನ್ನು ತುಳು ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಲಾಗುತ್ತೆ ಎನ್ನುವ ಮಾತು ಕೇಳಿಬಂದಿದ್ದು, ಈ ಬಗ್ಗೆ ತಿಳಿದ ತುಳು ಸಂಘಟನೆಯ ಪ್ರಮುಖರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಾವು ತುಳು ಭಾಷೆ, ಸಂಸ್ಕೃತಿ, ಸಾಹಿತ್ಯ, ಸಂಶೋಧನೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ತುಳು ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷರ ನೇಮಕಾತಿ ಸಂಬಂಧಿಸಿದಂತೆ ನಡೆಯುತ್ತಿರುವ ವಿದ್ಯಮಾನ ಕಂಡು ಆತಂಕಗೊಂಡಿದ್ದೇವೆ. ತುಳು ಭಾಷೆ, ಸಂಸ್ಕೃತಿಗೆ ಯಾವುದೇ ಕೊಡುಗೆ ನೀಡದ ವ್ಯಕ್ತಿಯನ್ನು ಅಕಾಡೆಮಿ ಅಧ್ಯಕ್ಷ ಪದವಿಗೆ ನೇಮಕ ಮಾಡುತ್ತಿರುವುದಕ್ಕೆ ನಮ್ಮ ಆಕ್ಷೇಪ ಇದೆ. ಈ ರೀತಿಯ ಅನಪೇಕ್ಷಿತ ವ್ಯಕ್ತಿಯನ್ನು ನೇಮಕ ಮಾಡುವುದರಿಂದ ನಿಮ್ಮ ಸರಕಾರದ ಘನತೆಗೆ ಕುಂದು ಬರಲಿದೆ. ಭಾಷಾ ಅಕಾಡೆಮಿಗೆ ಆಯಾ ಕ್ಷೇತ್ರದ ಸಾಧಕರನ್ನು, ಅಧ್ಯಯನ ಆಸಕ್ತರನ್ನು, ಬರಹಗಾರರನ್ನು ನೇಮಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಮಂಗಳೂರಿನ ತುಳು ಸಂಘಟಕರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಕರಾವಳಿಗೆ ಸಂಬಂಧಪಟ್ಟ ಮೂಡಾ, ಗೇರು ಅಭಿವೃದ್ಧಿ ನಿಗಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸೇರಿ ಹಲವು ನಿಗಮಗಳಿಗೆ ಅಧ್ಯಕ್ಷರ ನೇಮಕ ಆಗಿತ್ತು. ಈ ಬಾರಿ ತುಳು ಅಕಾಡೆಮಿ ಅಧ್ಯಕ್ಷರಾಗುವುದಕ್ಕೆ ಹತ್ತಕ್ಕೂ ಹೆಚ್ಚು ಮಂದಿ ಆಸಕ್ತಿ ಹೊಂದಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಯಾರನ್ನು ಶಿಫಾರಸು ಮಾಡುತ್ತೋ ಅವರನ್ನು ಆಯ್ಕೆ ಮಾಡುವುದು ವಾಡಿಕೆ. ಗುರುಪುರ ಬ್ಲಾಕ್ ಕಾಂಗ್ರೆಸಿನ ಪ್ರಮುಖರನ್ನು ಮಾಜಿ ಸಚಿವರೊಬ್ಬರು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದ್ದು, ತುಳು ಭಾಷೆಯ ಬಗ್ಗೆ ಗಂಧಗಾಳಿ ತಿಳಿದಿಲ್ಲದ ವ್ಯಕ್ತಿಯನ್ನು ಭಾಷಾ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಿದರೆ ಅಕಾಡೆಮಿಗೇನು ಪ್ರಯೋಜನ ಎಂದು ತುಳು ಸಾಹಿತ್ಯಾಸಕ್ತರು ಪ್ರಶ್ನೆ ಮಾಡಿದ್ದಾರೆ.
Mangalore Tulu academy president post still vacant, Tulu activist write letter to cm siddaramaiah.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm