ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm