ಬ್ರೇಕಿಂಗ್ ನ್ಯೂಸ್
15-03-24 07:21 pm Mangalore Correspondent ಕರಾವಳಿ
ಮಂಗಳೂರು, ಮಾ.15: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ. ಇದಕ್ಕಾಗಿ ಮಾರ್ಚ್ 31 ಮತ್ತು ಎಪ್ರಿಲ್ 14ರಂದು ಪ್ರವೇಶ ಪರೀಕ್ಷೆ ಏರ್ಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಡಾ.ಮೋಹನ ಆಳ್ವಾ, ಹತ್ತನೇ ತರಗತಿಯಲ್ಲಿ ಸಿಬಿಎಸ್ ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ ಇ (ಭಾರತೀಯ ಪ್ರೌಢ ಶಿಕ್ಷಣ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಉದ್ದೇಶದ ಪರೀಕ್ಷೆಯನ್ನು ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಉಚಿತ ಶಿಕ್ಷಣ ಪಡೆಯಲು ಅರ್ಹತೆ ಪಡೆಯಲಿದ್ದಾರೆ ಎಂದು ತಿಳಿಸಿದರು.
ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನ ಕುರಿತು 100 ನಿಮಿಷಗಳ ಪ್ರವೇಶ ಪರೀಕ್ಷೆ ಇರಲಿದೆ. ಮಾರ್ಚ್ 31ರಂದು ಸಿಬಿಎಸ್ ಇ ಹಾಗೂ ಐಸಿಎಸ್ಇ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುತ್ತದೆ. ಎಪ್ರಿಲ್ 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎರಡೂ ಪರೀಕ್ಷೆಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ. ಸಿಬಿಎಸ್ ಇ ಹಾಗೂ ಐಸಿಎಸ್ ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿರುತ್ತದೆ. ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಎಪ್ರಿಲ್ 10ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ವೆಬ್ ಸೈಟ್ https://scholarship.alvas.org/puc/login.php ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇದಲ್ಲದೆ, ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ ಅಂಕದ ಜೊತೆಗೆ ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೆ ಆಯ್ಕೆಗಳು ನಡೆಯುತ್ತವೆ. ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ. ಮೇಲು-ಕೀಳು, ಲಿಂಗ ತಾರತಮ್ಯ ಇಲ್ಲದೆ ಅರ್ಹ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಲ್ಲಿ ಪ್ರವೇಶ ಪರೀಕ್ಷೆ ಕೈಗೊಳ್ಳಲಾಗುತ್ತಿದ್ದು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8884477588, 6366377827, 6366377823 ಸಂಪರ್ಕಿಸಬಹುದು.
Mangalore moodbidri Alvas educational trust announes 10 crore Rs free Scholarosip, apply now.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm