ಬ್ರೇಕಿಂಗ್ ನ್ಯೂಸ್
15-03-24 07:21 pm Mangalore Correspondent ಕರಾವಳಿ
ಮಂಗಳೂರು, ಮಾ.15: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ. ಇದಕ್ಕಾಗಿ ಮಾರ್ಚ್ 31 ಮತ್ತು ಎಪ್ರಿಲ್ 14ರಂದು ಪ್ರವೇಶ ಪರೀಕ್ಷೆ ಏರ್ಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಡಾ.ಮೋಹನ ಆಳ್ವಾ, ಹತ್ತನೇ ತರಗತಿಯಲ್ಲಿ ಸಿಬಿಎಸ್ ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ ಇ (ಭಾರತೀಯ ಪ್ರೌಢ ಶಿಕ್ಷಣ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಉದ್ದೇಶದ ಪರೀಕ್ಷೆಯನ್ನು ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಉಚಿತ ಶಿಕ್ಷಣ ಪಡೆಯಲು ಅರ್ಹತೆ ಪಡೆಯಲಿದ್ದಾರೆ ಎಂದು ತಿಳಿಸಿದರು.
ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನ ಕುರಿತು 100 ನಿಮಿಷಗಳ ಪ್ರವೇಶ ಪರೀಕ್ಷೆ ಇರಲಿದೆ. ಮಾರ್ಚ್ 31ರಂದು ಸಿಬಿಎಸ್ ಇ ಹಾಗೂ ಐಸಿಎಸ್ಇ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುತ್ತದೆ. ಎಪ್ರಿಲ್ 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎರಡೂ ಪರೀಕ್ಷೆಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ. ಸಿಬಿಎಸ್ ಇ ಹಾಗೂ ಐಸಿಎಸ್ ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿರುತ್ತದೆ. ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಎಪ್ರಿಲ್ 10ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ವೆಬ್ ಸೈಟ್ https://scholarship.alvas.org/puc/login.php ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇದಲ್ಲದೆ, ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ ಅಂಕದ ಜೊತೆಗೆ ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೆ ಆಯ್ಕೆಗಳು ನಡೆಯುತ್ತವೆ. ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ. ಮೇಲು-ಕೀಳು, ಲಿಂಗ ತಾರತಮ್ಯ ಇಲ್ಲದೆ ಅರ್ಹ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಲ್ಲಿ ಪ್ರವೇಶ ಪರೀಕ್ಷೆ ಕೈಗೊಳ್ಳಲಾಗುತ್ತಿದ್ದು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8884477588, 6366377827, 6366377823 ಸಂಪರ್ಕಿಸಬಹುದು.
Mangalore moodbidri Alvas educational trust announes 10 crore Rs free Scholarosip, apply now.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm