ಬ್ರೇಕಿಂಗ್ ನ್ಯೂಸ್
15-03-24 08:30 pm Mangalore Correspondent ಕರಾವಳಿ
ಪುತ್ತೂರು, ಮಾ.15: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದ ಅರುಣ್ ಪುತ್ತಿಲ ತಣ್ಣಗಾಗಿದ್ದಾರೆ. ಶುಕ್ರವಾರ ಸಂಜೆ ಮಂಗಳೂರಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅರುಣ್ ಪುತ್ತಿಲ ಮತ್ತು ಬೆಂಬಲಿಗರು ಅಧಿಕೃತವಾಗಿ ಬಿಜೆಪಿ ಸೇರುವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿತ್ತು. ಆದರೆ ಅಷ್ಟರಲ್ಲೇ ಪುತ್ತೂರಿನ ಕೆಲವು ಕಾರ್ಯಕರ್ತರು ಸಿಡಿದು ನಿಂತಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಈ ಬಗ್ಗೆ ವಿಚಾರ ತಿಳಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪುತ್ತೂರಿಗೆ ತೆರಳಿದ್ದು, ಬಿಜೆಪಿ ಕಚೇರಿಯಲ್ಲೇ ಬಾಗಿಲು ಹಾಕಿ ಕಾರ್ಯಕರ್ತರನ್ನು ಮನವೊಲಿಸುವ ಕೆಲಸ ಮಾಡಿದ್ದಾರೆ. ಆದರೆ ಕೆಲವು ಕಾರ್ಯಕರ್ತರು ಅರುಣ್ ಪುತ್ತಿಲರನ್ನು ಮರಳಿ ಬಿಜೆಪಿ ಸೇರಿಸಬಾರದು ಎಂದೇ ಪಟ್ಟು ಹಿಡಿದಿದ್ದಾರಂತೆ. ಪಕ್ಷಕ್ಕೆ ಸೇರಿಸಿದರೂ ಪ್ರಮುಖ ಜವಾಬ್ದಾರಿ ನೀಡಬಾರದು ಎಂದು ಒತ್ತಾಯ ಮಾಡಿದ್ದಾರಂತೆ. ಸಂಜೆ 5 ಗಂಟೆಗೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಶುರುವಾದ ಸಭೆ ರಾತ್ರಿ ಗಂಟೆ ಎಂಟಾದರೂ ಮುಗಿದಿಲ್ಲ. ಪ್ರಭಾವಿ ರಾಜಕಾರಣಿಯೊಬ್ಬರ ಆಪ್ತರಾದ ಕೆಲವು ಕಾರ್ಯಕರ್ತರು ಜಿಲ್ಲಾಧ್ಯಕ್ಷರನ್ನೇ ಕಚೇರಿಯಲ್ಲಿ ಕೂಡಿಹಾಕಿ ಬೆದರಿಸುವ ಕೆಲಸ ಮಾಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಅರುಣ್ ಪುತ್ತಿಲ ಮತ್ತು ಪ್ರಸನ್ನ ಮಾರ್ತ ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಆನಂತರ, ರಾಜ್ಯ ಕಾರ್ಯದರ್ಶಿ ಸುನಿಲ್ ಕುಮಾರ್ ಮತ್ತು ಅರುಣ್ ಪುತ್ತಿಲ ಮಾಧ್ಯಮಕ್ಕೂ ಹೇಳಿಕೆಯನ್ನು ನೀಡಿದ್ದರು. ಶುಕ್ರವಾರ ಸಂಜೆ ಅರುಣ್ ಪುತ್ತಿಲ ತನ್ನ 250ಕ್ಕೂ ಹೆಚ್ಚು ಬೆಂಬಲಿಗರ ಜೊತೆ ಮಂಗಳೂರಿನಲ್ಲಿ ಪಕ್ಷ ಸೇರ್ಪಡೆಗೆ ಸಿದ್ದತೆಯನ್ನೂ ನಡೆಸಿದ್ದರು. ಆದರೆ, ಲೋಕಸಭೆ ಟಿಕೆಟ್ ನಳಿನ್ ಕುಮಾರ್ ಕೈತಪ್ಪಿದ ಬೆನ್ನಲ್ಲೇ ಅರುಣ್ ಪುತ್ತಿಲ ಬಿಜೆಪಿ ಸೇರಿದ್ದು ಹೇಗೆ ಎನ್ನುವ ಪ್ರಶ್ನೆ ಮುಂದಿಟ್ಟು ಕೆಲವು ಕಾರ್ಯಕರ್ತರು ತಗಾದೆ ತೆಗೆದಿದ್ದಾರೆ. ಸೌಮ್ಯ ಸ್ವಭಾವದ ಜಿಲ್ಲಾಧ್ಯಕ್ಷರನ್ನೇ ಎದುರಿಗಿಟ್ಟು ಬೆದರಿಸುವ ತಂತ್ರಗಾರಿಕೆ ಮಾಡಿದ್ದಾರೆ. ಸತೀಶ್ ಕುಂಪಲ ಮತ್ತು ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಸೇರಿ ಕಾರ್ಯಕರ್ತರನ್ನು ಸಂತೈಸುವ ಕೆಲಸ ಮಾಡಿದ್ದಾರೆ. ಸಂಜೀವ ಮಠಂದೂರು, ಸಂತೋಷ್ ರೈ ಕೈಕಾರ ಸೇರಿದಂತೆ ಪ್ರಮುಖರು ಜೊತೆಗಿದ್ದರು. ವಿರೋಧ ಮಾಡಿರುವವರಲ್ಲಿ ಪುತ್ತೂರು ಬಿಜೆಪಿಯ ಪದಾಧಿಕಾರಿಗಳು ಇರಲಿಲ್ಲ ಎನ್ನುವ ಮಾತನ್ನು ಅಲ್ಲಿದ್ದವರು ತಿಳಿಸಿದ್ದಾರೆ.
Arun Puthila joins BJP, party leaders oppose decesion, keep district president out of BJP Office at Puttur
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm