ಬ್ರೇಕಿಂಗ್ ನ್ಯೂಸ್
15-03-24 08:30 pm Mangalore Correspondent ಕರಾವಳಿ
ಪುತ್ತೂರು, ಮಾ.15: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದ ಅರುಣ್ ಪುತ್ತಿಲ ತಣ್ಣಗಾಗಿದ್ದಾರೆ. ಶುಕ್ರವಾರ ಸಂಜೆ ಮಂಗಳೂರಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅರುಣ್ ಪುತ್ತಿಲ ಮತ್ತು ಬೆಂಬಲಿಗರು ಅಧಿಕೃತವಾಗಿ ಬಿಜೆಪಿ ಸೇರುವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿತ್ತು. ಆದರೆ ಅಷ್ಟರಲ್ಲೇ ಪುತ್ತೂರಿನ ಕೆಲವು ಕಾರ್ಯಕರ್ತರು ಸಿಡಿದು ನಿಂತಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಈ ಬಗ್ಗೆ ವಿಚಾರ ತಿಳಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪುತ್ತೂರಿಗೆ ತೆರಳಿದ್ದು, ಬಿಜೆಪಿ ಕಚೇರಿಯಲ್ಲೇ ಬಾಗಿಲು ಹಾಕಿ ಕಾರ್ಯಕರ್ತರನ್ನು ಮನವೊಲಿಸುವ ಕೆಲಸ ಮಾಡಿದ್ದಾರೆ. ಆದರೆ ಕೆಲವು ಕಾರ್ಯಕರ್ತರು ಅರುಣ್ ಪುತ್ತಿಲರನ್ನು ಮರಳಿ ಬಿಜೆಪಿ ಸೇರಿಸಬಾರದು ಎಂದೇ ಪಟ್ಟು ಹಿಡಿದಿದ್ದಾರಂತೆ. ಪಕ್ಷಕ್ಕೆ ಸೇರಿಸಿದರೂ ಪ್ರಮುಖ ಜವಾಬ್ದಾರಿ ನೀಡಬಾರದು ಎಂದು ಒತ್ತಾಯ ಮಾಡಿದ್ದಾರಂತೆ. ಸಂಜೆ 5 ಗಂಟೆಗೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಶುರುವಾದ ಸಭೆ ರಾತ್ರಿ ಗಂಟೆ ಎಂಟಾದರೂ ಮುಗಿದಿಲ್ಲ. ಪ್ರಭಾವಿ ರಾಜಕಾರಣಿಯೊಬ್ಬರ ಆಪ್ತರಾದ ಕೆಲವು ಕಾರ್ಯಕರ್ತರು ಜಿಲ್ಲಾಧ್ಯಕ್ಷರನ್ನೇ ಕಚೇರಿಯಲ್ಲಿ ಕೂಡಿಹಾಕಿ ಬೆದರಿಸುವ ಕೆಲಸ ಮಾಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಅರುಣ್ ಪುತ್ತಿಲ ಮತ್ತು ಪ್ರಸನ್ನ ಮಾರ್ತ ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಆನಂತರ, ರಾಜ್ಯ ಕಾರ್ಯದರ್ಶಿ ಸುನಿಲ್ ಕುಮಾರ್ ಮತ್ತು ಅರುಣ್ ಪುತ್ತಿಲ ಮಾಧ್ಯಮಕ್ಕೂ ಹೇಳಿಕೆಯನ್ನು ನೀಡಿದ್ದರು. ಶುಕ್ರವಾರ ಸಂಜೆ ಅರುಣ್ ಪುತ್ತಿಲ ತನ್ನ 250ಕ್ಕೂ ಹೆಚ್ಚು ಬೆಂಬಲಿಗರ ಜೊತೆ ಮಂಗಳೂರಿನಲ್ಲಿ ಪಕ್ಷ ಸೇರ್ಪಡೆಗೆ ಸಿದ್ದತೆಯನ್ನೂ ನಡೆಸಿದ್ದರು. ಆದರೆ, ಲೋಕಸಭೆ ಟಿಕೆಟ್ ನಳಿನ್ ಕುಮಾರ್ ಕೈತಪ್ಪಿದ ಬೆನ್ನಲ್ಲೇ ಅರುಣ್ ಪುತ್ತಿಲ ಬಿಜೆಪಿ ಸೇರಿದ್ದು ಹೇಗೆ ಎನ್ನುವ ಪ್ರಶ್ನೆ ಮುಂದಿಟ್ಟು ಕೆಲವು ಕಾರ್ಯಕರ್ತರು ತಗಾದೆ ತೆಗೆದಿದ್ದಾರೆ. ಸೌಮ್ಯ ಸ್ವಭಾವದ ಜಿಲ್ಲಾಧ್ಯಕ್ಷರನ್ನೇ ಎದುರಿಗಿಟ್ಟು ಬೆದರಿಸುವ ತಂತ್ರಗಾರಿಕೆ ಮಾಡಿದ್ದಾರೆ. ಸತೀಶ್ ಕುಂಪಲ ಮತ್ತು ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಸೇರಿ ಕಾರ್ಯಕರ್ತರನ್ನು ಸಂತೈಸುವ ಕೆಲಸ ಮಾಡಿದ್ದಾರೆ. ಸಂಜೀವ ಮಠಂದೂರು, ಸಂತೋಷ್ ರೈ ಕೈಕಾರ ಸೇರಿದಂತೆ ಪ್ರಮುಖರು ಜೊತೆಗಿದ್ದರು. ವಿರೋಧ ಮಾಡಿರುವವರಲ್ಲಿ ಪುತ್ತೂರು ಬಿಜೆಪಿಯ ಪದಾಧಿಕಾರಿಗಳು ಇರಲಿಲ್ಲ ಎನ್ನುವ ಮಾತನ್ನು ಅಲ್ಲಿದ್ದವರು ತಿಳಿಸಿದ್ದಾರೆ.
Arun Puthila joins BJP, party leaders oppose decesion, keep district president out of BJP Office at Puttur
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm