ಬ್ರೇಕಿಂಗ್ ನ್ಯೂಸ್
15-03-24 08:30 pm Mangalore Correspondent ಕರಾವಳಿ
ಪುತ್ತೂರು, ಮಾ.15: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದ ಅರುಣ್ ಪುತ್ತಿಲ ತಣ್ಣಗಾಗಿದ್ದಾರೆ. ಶುಕ್ರವಾರ ಸಂಜೆ ಮಂಗಳೂರಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅರುಣ್ ಪುತ್ತಿಲ ಮತ್ತು ಬೆಂಬಲಿಗರು ಅಧಿಕೃತವಾಗಿ ಬಿಜೆಪಿ ಸೇರುವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿತ್ತು. ಆದರೆ ಅಷ್ಟರಲ್ಲೇ ಪುತ್ತೂರಿನ ಕೆಲವು ಕಾರ್ಯಕರ್ತರು ಸಿಡಿದು ನಿಂತಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಈ ಬಗ್ಗೆ ವಿಚಾರ ತಿಳಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪುತ್ತೂರಿಗೆ ತೆರಳಿದ್ದು, ಬಿಜೆಪಿ ಕಚೇರಿಯಲ್ಲೇ ಬಾಗಿಲು ಹಾಕಿ ಕಾರ್ಯಕರ್ತರನ್ನು ಮನವೊಲಿಸುವ ಕೆಲಸ ಮಾಡಿದ್ದಾರೆ. ಆದರೆ ಕೆಲವು ಕಾರ್ಯಕರ್ತರು ಅರುಣ್ ಪುತ್ತಿಲರನ್ನು ಮರಳಿ ಬಿಜೆಪಿ ಸೇರಿಸಬಾರದು ಎಂದೇ ಪಟ್ಟು ಹಿಡಿದಿದ್ದಾರಂತೆ. ಪಕ್ಷಕ್ಕೆ ಸೇರಿಸಿದರೂ ಪ್ರಮುಖ ಜವಾಬ್ದಾರಿ ನೀಡಬಾರದು ಎಂದು ಒತ್ತಾಯ ಮಾಡಿದ್ದಾರಂತೆ. ಸಂಜೆ 5 ಗಂಟೆಗೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಶುರುವಾದ ಸಭೆ ರಾತ್ರಿ ಗಂಟೆ ಎಂಟಾದರೂ ಮುಗಿದಿಲ್ಲ. ಪ್ರಭಾವಿ ರಾಜಕಾರಣಿಯೊಬ್ಬರ ಆಪ್ತರಾದ ಕೆಲವು ಕಾರ್ಯಕರ್ತರು ಜಿಲ್ಲಾಧ್ಯಕ್ಷರನ್ನೇ ಕಚೇರಿಯಲ್ಲಿ ಕೂಡಿಹಾಕಿ ಬೆದರಿಸುವ ಕೆಲಸ ಮಾಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಅರುಣ್ ಪುತ್ತಿಲ ಮತ್ತು ಪ್ರಸನ್ನ ಮಾರ್ತ ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಆನಂತರ, ರಾಜ್ಯ ಕಾರ್ಯದರ್ಶಿ ಸುನಿಲ್ ಕುಮಾರ್ ಮತ್ತು ಅರುಣ್ ಪುತ್ತಿಲ ಮಾಧ್ಯಮಕ್ಕೂ ಹೇಳಿಕೆಯನ್ನು ನೀಡಿದ್ದರು. ಶುಕ್ರವಾರ ಸಂಜೆ ಅರುಣ್ ಪುತ್ತಿಲ ತನ್ನ 250ಕ್ಕೂ ಹೆಚ್ಚು ಬೆಂಬಲಿಗರ ಜೊತೆ ಮಂಗಳೂರಿನಲ್ಲಿ ಪಕ್ಷ ಸೇರ್ಪಡೆಗೆ ಸಿದ್ದತೆಯನ್ನೂ ನಡೆಸಿದ್ದರು. ಆದರೆ, ಲೋಕಸಭೆ ಟಿಕೆಟ್ ನಳಿನ್ ಕುಮಾರ್ ಕೈತಪ್ಪಿದ ಬೆನ್ನಲ್ಲೇ ಅರುಣ್ ಪುತ್ತಿಲ ಬಿಜೆಪಿ ಸೇರಿದ್ದು ಹೇಗೆ ಎನ್ನುವ ಪ್ರಶ್ನೆ ಮುಂದಿಟ್ಟು ಕೆಲವು ಕಾರ್ಯಕರ್ತರು ತಗಾದೆ ತೆಗೆದಿದ್ದಾರೆ. ಸೌಮ್ಯ ಸ್ವಭಾವದ ಜಿಲ್ಲಾಧ್ಯಕ್ಷರನ್ನೇ ಎದುರಿಗಿಟ್ಟು ಬೆದರಿಸುವ ತಂತ್ರಗಾರಿಕೆ ಮಾಡಿದ್ದಾರೆ. ಸತೀಶ್ ಕುಂಪಲ ಮತ್ತು ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಸೇರಿ ಕಾರ್ಯಕರ್ತರನ್ನು ಸಂತೈಸುವ ಕೆಲಸ ಮಾಡಿದ್ದಾರೆ. ಸಂಜೀವ ಮಠಂದೂರು, ಸಂತೋಷ್ ರೈ ಕೈಕಾರ ಸೇರಿದಂತೆ ಪ್ರಮುಖರು ಜೊತೆಗಿದ್ದರು. ವಿರೋಧ ಮಾಡಿರುವವರಲ್ಲಿ ಪುತ್ತೂರು ಬಿಜೆಪಿಯ ಪದಾಧಿಕಾರಿಗಳು ಇರಲಿಲ್ಲ ಎನ್ನುವ ಮಾತನ್ನು ಅಲ್ಲಿದ್ದವರು ತಿಳಿಸಿದ್ದಾರೆ.
Arun Puthila joins BJP, party leaders oppose decesion, keep district president out of BJP Office at Puttur
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm