ಬ್ರೇಕಿಂಗ್ ನ್ಯೂಸ್
16-03-24 09:35 pm Mangalore Correspondent ಕರಾವಳಿ
ಮಂಗಳೂರು, ಮಾ.16: ಜಟಾಪಟಿ, ವಿರೋಧ, ಗೊಂದಲದ ಬಳಿಕ ಪುತ್ತಿಲ ಪರಿವಾರದ ಕಾರ್ಯಕರ್ತರು ಅರುಣ ಪುತ್ತಿಲ ನೇತೃತ್ವದಲ್ಲಿ ಬಿಜೆಪಿ ಜೊತೆಗೆ ಕೈಜೋಡಿಸಿದ್ದಾರೆ.
ಶನಿವಾರ ಸಂಜೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ಬಿಜೆಪಿ ಚುನಾವಣಾ ಕಚೇರಿಗೆ ನೂರಾರು ಬೆಂಬಲಿಗರ ಜೊತೆಗೆ ಬಂದಿದ್ದ ಅರುಣ್ ಪುತ್ತಿಲ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಬರಮಾಡಿಕೊಂಡರು. ಇದೇ ವೇಳೆ ಮಾತನಾಡಿದ ಸತೀಶ್ ಕುಂಪಲ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಆಗಿಸುವುದಷ್ಟೇ ನಮ್ಮ ಗುರಿ. ಅರುಣ್ ಪುತ್ತಿಲ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಆದರೆ ಕೆಲವು ಕಾರ್ಯಕರ್ತರಿಗೆ ಇದರಲ್ಲಿ ಗೊಂದಲ ಇದೆ. ನಾವು ಪಕ್ಷದ ಪ್ರಮುಖರ ಸೂಚನೆಯಂತೆ ಕೆಲಸ ಮಾಡುವುದಾಗಿದ್ದು ಪಕ್ಷದ ಕೆಲಸ ಎನ್ನುವುದು ಜವಾಬ್ದಾರಿ. ನಿಮ್ಮಲ್ಲಿ ನೂರು ಚಿಂತನೆಗಳು ಇರಬಹುದು. ಜಿಲ್ಲಾಧ್ಯಕ್ಷನಾಗಿ ನಾನು ಪಕ್ಷದ ಎಲ್ಲ ಕಾರ್ಯಕರ್ತರನ್ನೂ ಜೋಡಿಸಿಕೊಂಡು ಹೋಗಬೇಕಾಗಿದೆ. ಎಲ್ಲರ ಮಾತು ಕೇಳುವುದು ನನ್ನ ಕರ್ತವ್ಯ ಎಂದರು.
ಅರುಣ ಪುತ್ತಿಲ ಮತ್ತು ನಮಗೆ ಯಾವುದೇ ಗೊಂದಲ ಇರಲಿಲ್ಲ. ಹಾಗಾಗಿ, ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುವುದು, ಸೋಶಿಯಲ್ ಮೀಡಿಯಾದಲ್ಲಿ ಬರೆದು ಆಕ್ರೋಶ ತೀರಿಸಿಕೊಳ್ಳುವುದು ಸರಿಯಲ್ಲ. ರಾಜ್ಯಾಧ್ಯಕ್ಷರ ಸೂಚನೆಯಂತೆ ನಾವು ಕೆಲಸ ಮಾಡಬೇಕಾಗಿದೆ. ನಾವೆಲ್ಲ ಈಗ ಒಂದಾಗಿದ್ದು ನೀವು ಬೇರೆಯಲ್ಲ. ನಾವು ಬೇರೆಯಲ್ಲ. ನಿಮ್ಮ ಬೇಕು ಬೇಡಗಳನ್ನು ನಾವು ಕೇಳಬೇಕಾಗುತ್ತದೆ. ಅದು ನನ್ನ ಜವಾಬ್ದಾರಿ. ನಮ್ಮ ಗುರಿ ಇನ್ನು ಅತ್ಯಧಿಕ ಮತಗಳಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಅಷ್ಟೇ ಎಂದು ಹೇಳಿದರು.
ಅರುಣ್ ಪುತ್ತಿಲ ಮಾತನಾಡಿ, ನಾವು ನರೇಂದ್ರ ಮೋದಿ ಅವರನ್ನು ಮತ್ತೆ ಹತ್ತು ವರ್ಷಗಳ ಕಾಲ ಪ್ರಧಾನಿ ಮಾಡುವ ಉದ್ದೇಶದಿಂದ ಜೊತೆಯಾಗಿದ್ದೇವೆ. ಹಿಂದಿನ ಕಹಿ ನೆನಪುಗಳನ್ನು ಮರೆತು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ಇದೇ ವೇಳೆ, ಒಬ್ಬ ಕಾರ್ಯಕರ್ತ ನಮಗೆ ಕಿಶೋರ್ ಪುತ್ತೂರು ಜೊತೆಗೆ ಮಾತನಾಡಲಿಕ್ಕಿದೆ, ಮೀಡಿಯಾದವರು ಹೊರಗೆ ಹೋಗಿ ಎಂದು ಹೇಳಿದ್ದು ಸ್ವಲ್ಪ ಹೊತ್ತು ಗೊಂದಲಕ್ಕೆ ಕಾರಣವಾಯಿತು. ಪಕ್ಷದ ಜಿಲ್ಲಾ ಪ್ರಮುಖರು, ಪುತ್ತಿಲ ಪರಿವಾರದ ಪ್ರಮುಖರು ಇದ್ದರು. ಆನಂತರ, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಹಿಂದಿನ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಅರುಣ ಪುತ್ತಿಲ ಸೇರಿದಂತೆ ಪರಿವಾರದ ಪ್ರಮುಖರಿಗೆ ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದರು. ಅಲ್ಲದೆ, ಸಾಂಕೇತಿಕವಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಅರುಣ ಪುತ್ತಿಲರಿಗೆ ಕೊಟ್ಟು ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡರು.
Arun Puthila welcomed at BJP office in Mangalore, district president Satish Kumpala welcomed him to the party office amid hundreds of members.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm