ಬ್ರೇಕಿಂಗ್ ನ್ಯೂಸ್
17-03-24 05:20 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೋದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಬೇಕು. ಪಕ್ಷದ ಸೂಚನೆಯನ್ನು ಯಥಾವತ್ ಪಾಲಿಸಿ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಾವೆಲ್ಲ ಹೊತ್ತುಕೊಳ್ಳಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನಗೊಂಡಿದ್ದು ಅಸೆಂಬ್ಲಿ ಚುನಾವಣೆಯ ಜಟಾಪಟಿ ಬಳಿಕ ಮೊದಲ ಬಾರಿಗೆ ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಪುತ್ತಿಲ ಭೇಟಿ ನೀಡಿದರು.

ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಹಿಂದೆ ಒಂದಷ್ಟು ಗೊಂದಲ ಆಗಿರುವುದು ಸಹಜ. ನಾವೆಲ್ಲ ಅದನ್ನು ಒಪ್ಪಿಕೊಳ್ಳುತ್ತೇವೆ. ಎರಡು ಭಾಗಗಳಿಂದಲೂ ನೋವು ಆಗಿರುವುದು ಸಹಜ. ಆದರೆ ಆ ನೋವುಗಳನ್ನು ನಾವೆಲ್ಲ ಇವತ್ತು ಮರೆತಿದ್ದೇವೆ. ನಾವೆಲ್ಲ ಅಣ್ಣ ತಮ್ಮಂದಿರ ಮತ್ತು ಅಕ್ಕ ತಂಗಿಯರ ರೀತಿಯಲ್ಲಿ ಮುಂದಿನ ದಿನ ಪಕ್ಷಕ್ಕಾಗಿ ಕೆಲಸ ಮಾಡಲು ಬದ್ಧರಿದ್ದೇವೆ. ಪಕ್ಷದ ಸೂಚನೆಯನ್ನು ಪಾಲಿಸಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಮಾಡಲಿದ್ದೇವೆ ಎಂದರು.
ಇವತ್ತು ನಾವೆಲ್ಲ ಕಾರ್ಯಾಲಯದಲ್ಲಿ ಭಾಗಿಯಾಗಿ ಮುಕ್ತ ಮನಸ್ಸಿನಿಂದ ಜೊತೆಯಾಗಿದ್ದೇವೆ. ಈ ರೀತಿಯ ವಾತಾವರಣ ಮುಂದಿನ ನೂರಾರು ವರ್ಷಗಳ ಕಾಲ ಇರಲಿ. ಪುತ್ತೂರಿನಲ್ಲಿ ಬಿಜೆಪಿ ಯಾವತ್ತು ಸೋಲೋದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ. ಈ ಕ್ಷಣದಿಂದಲೇ ನಾವೆಲ್ಲ ಪಕ್ಷ ಕೊಟ್ಟಿರುವ ಕೆಲಸವನ್ನು ನಿರ್ವಹಿಸಿಕೊಂಡು ನಾಳಿನ ದಿನ ಚುನಾವಣೆಯಲ್ಲಿ ಬ್ರಿಜೇಶ್ ಚೌಟ ಅವರನ್ನು ನಾಲ್ಕು ಲಕ್ಷ ಅಧಿಕ ಮತಗಳಿಂದ ಗೆಲ್ಲಿಸುವ ಯೋಚನೆ ಕಾರ್ಯಕರ್ತರು ಮಾಡಿದರೆ ಯಾವುದೇ ಕಾರ್ಯ ಕಷ್ಟವಾಗುವುದಿಲ್ಲ ಎಂದರು. ಇವತ್ತು ಸಾಮಾಜಿಕ ಜಾಲತಾಣ ಬಹಳ ಪ್ರಬಲವಾಗಿದೆ. ಹಾಗಾಗಿ ಪಕ್ಷದ ವಿಚಾರದಲ್ಲಿ ನಮ್ಮ ಸಂಘ, ನಾಯಕರ ವಿರುದ್ಧ ಯಾರು ಕೂಡ ವೈಯುಕ್ತಿಕ ವಿಚಾರ ಮುಂದಿಟ್ಟು ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶ ರವಾನಿಸಬಾರದು. ಸಾಮಾಜಿಕ ಜಾಲತಾಣದ ವಿಷಯ ಬಿಟ್ಟು ನಾವೆಲ್ಲ ನಮ್ಮ ಬೂತ್ ನಲ್ಲಿ ಕಾರ್ಯ ಮಾಡಬೇಕು ಎಂದರು.
Puttur Arun Puthila to BJP, BJP will never lose in Puttur. He said I am back to BJP so let's forget all the past and concentrate on the upcoming Elections.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm