ಬ್ರೇಕಿಂಗ್ ನ್ಯೂಸ್
18-03-24 11:05 am Mangalore Correspondent ಕರಾವಳಿ
ಉಳ್ಳಾಲ, ಮಾ.18: ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ತಲಪಾಡಿಯಲ್ಲಿ ನಡೆದಿದೆ.
ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49) ಮೃತ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದ್ದು, ಎದುರು ಭಾಗದ ಹೆದ್ದಾರಿ ಬದಿಯಲ್ಲೇ ಮನೆ ಹೊಂದಿದ್ದಾರೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಹಿನ್ನೆಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನ ಉಪಚರಿಸಿ ಮಧ್ಯಾಹ್ನ ವೇಳೆ ಬೇಕರಿಗೆ ತೆರಳುತ್ತಿದ್ದರು. ಹೆದ್ದಾರಿ ದಾಟಲು ನಿಂತಿದ್ದ ವೇಳೆ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಧಾವಿಸಿ ಬಂದಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಾಜೇಶ್ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಮೃತ ರಾಜೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಹಿರಿಯ ಮಗಳು ಪದವಿ ಶಿಕ್ಷಣ ಪಡೆಯುತ್ತಿದ್ದು, ಕಿರಿಯ ಮಗಳು ಎಸ್ಸೆಸೆಲ್ಸಿ ಓದುತ್ತಿದ್ದಾರೆ. ಈಕೆ ಇದೇ ಮಾ.25 ರಂದು ನಡೆಯಲಿರುವ ಬೋರ್ಡ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ರಾಜೇಶ್ ಅವರ ಅಕಾಲಿಕ ಸಾವಿನಿಂದ ಪತ್ನಿ , ಮಕ್ಕಳು ಆಘಾತಕ್ಕೊಳಗಾಗಿದ್ದಾರೆ.
ಮೃತ ರಾಜೇಶ್ ತಲಪಾಡಿ ವೀರಾಂಜನೇಯ ವ್ಯಾಯಾಮ ಶಾಲೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನೆಗೆ ಕಾರಣನಾದ ಬೈಕ್ ಸವಾರ ಮಹಮ್ಮದ್ ಸೊಹೈಲ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Mangalore Talapady Accident, 49 year old man dies after bike rams over pedestrian. The deceased has been identified as Rajesh Shetty.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am