ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm