Mangalore Naxal combing Sullia: ಸುಳ್ಯ ಕಡಮಕಲ್ ಎಸ್ಟೇಟ್ ಬಳಿ ನಕ್ಸಲರ ಪ್ರತ್ಯಕ್ಷ ;  ಎಎನ್ಎಫ್ ಕೂಂಬಿಂಗ್, ಪರಿಸರದಲ್ಲಿ ಆತಂಕ 

18-03-24 02:55 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.

ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.

ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.

ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.

ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.

Mangalore Naxal combing operations at Sullia after residents see naxal moment.