ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.
ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm